ಕರ್ನಾಟಕ

karnataka

By

Published : May 20, 2022, 10:32 PM IST

ETV Bharat / city

ಈ ಸಲ ಸಮವಸ್ತ್ರ ವಿತರಣೆಯಲ್ಲಿ ಕೊಂಚ ವಿಳಂಬ ಸಾಧ್ಯತೆ: ಸಚಿವ ಬಿ.ಸಿ.ನಾಗೇಶ್

ರಾಜ್ಯ ಹಾಗೂ ದೇಶವ್ಯಾಪಿ ಚರ್ಚೆಗೆ ಒಳಗಾಗಿದ್ದ ಸಮವಸ್ತ್ರ ವಿವಾದಕ್ಕೆ ಮತ್ತೆ ಅವಕಾಶ ನೀಡದಂತೆ ಸರ್ಕಾರ ಕ್ರಮ ಕೈಗೊಂಡಿದ್ದು, ಈಗಾಗಲೇ ಶಾಲಾಭಿವೃದ್ಧಿ ಸಮಿತಿಗೆ ಸಮವಸ್ತ್ರದ ಕುರಿತು ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

minister BC nagesh allegations against congress
ಶಿಕ್ಷಣ ವಿಚಾರದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ : ಸಚಿವ ಬಿ.ಸಿ.ನಾಗೇಶ್ ಆರೋಪ

ಪುತ್ತೂರು: ಶಿಕ್ಷಣ ವಿಚಾರದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರು ಇತ್ತೀಚಿನ ದಿನಗಳಲ್ಲಿ ಶಾಲಾ ಪಠ್ಯ ಪುಸ್ತಕದಲ್ಲಿ ಭಗತ್ ಸಿಂಗ್, ನಾರಾಯಣ ಗುರು, ಬಸವಣ್ಣ ಪಠ್ಯಗಳನ್ನು ತೆಗೆದು ಹಾಕಿದೆ ಎಂದು ಸುಳ್ಳುಸುದ್ದಿಯನ್ನು ಹರಡುವ ಕಾರ್ಯ ಮಾಡುತ್ತಿದ್ದಾರೆ. ಆದರೆ ಯಾವ ಪಠ್ಯವನ್ನೂ ತೆಗೆದು ಹಾಕಿಲ್ಲ. ಮಕ್ಕಳಿಗೆ ಹೊರೆಯಾಗದಿರಲಿ ಎನ್ನುವ ಕಾರಣಕ್ಕೆ ಪಠ್ಯದಲ್ಲಿ ಕೊಂಚ ಬದಲಾವಣೆಗಳನ್ನು ಮಾಡಲಾಗಿದೆ. ಕಾಂಗ್ರೆಸ್​​ನ ಸುಳ್ಳು ಆರೋಪಕ್ಕೆ ಪಠ್ಯ ಪುಸ್ತಕ ಮುದ್ರಣಗೊಂಡು ಬಂದ ಬಳಿಕ ಉತ್ತರ ಸಿಗಲಿದೆ ಎಂದು ಹೇಳಿದರು.

ರಾಜ್ಯ ಹಾಗೂ ದೇಶವ್ಯಾಪಿ ಚರ್ಚೆಗೆ ಒಳಗಾಗಿದ್ದ ಸಮವಸ್ತ್ರ ವಿವಾದಕ್ಕೆ ಮತ್ತೆ ಅವಕಾಶ ನೀಡದಂತೆ ಸರ್ಕಾರ ಕ್ರಮ ಕೈಗೊಂಡಿದ್ದು, ಈಗಾಗಲೇ ಶಾಲಾಭಿವೃದ್ಧಿ ಸಮಿತಿಗೆ ಸಮವಸ್ತ್ರದ ಕುರಿತು ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಫ್ರೌಢ ಶಾಲಾ ಮಟ್ಟದವರೆಗೆ ಸರ್ಕಾರವೇ ಮಕ್ಕಳಿಗೆ ಸಮವಸ್ತ್ರ ವಿತರಿಸುವ ವ್ಯವಸ್ಥೆಯನ್ನು ಮಾಡಲಿದ್ದು, ಈ‌ ಬಾರಿ‌ ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಸಮವಸ್ತ್ರ ವಿತರಣೆಯಲ್ಲಿ ಕೊಂಚ ತಡವಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ಶಿಕ್ಷಣ ವಿಚಾರದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಸಚಿವ ಬಿಸಿ ನಾಗೇಶ್ ಆರೋಪಿಸಿದ್ದಾರೆ.

ಈ ಬಾರಿ ಪಠ್ಯ ಪುಸ್ತಕವನ್ನು ಶಾಲೆ ಆರಂಭಗೊಂಡ ತಿಂಗಳ ಒಳಗಾಗಿ ವಿತರಿಸುವ ವ್ಯವಸ್ಥೆಯನ್ನು ಮಾಡಲಾಗುವುದು. ಅಲ್ಲದೆ ಈ ಬಾರಿ ರಾಜ್ಯದ‌ ಇತಿಹಾಸದಲ್ಲೇ‌ ಮೊದಲ ಬಾರಿಗೆ ಶಾಲೆ ಆರಂಭದಂದೇ ಅತಿಥಿ‌ ಶಿಕ್ಷಕರನ್ನು ನೇಮಿಸಲಾಗಿದ್ದು, 15 ಸಾವಿರ ಹೊಸ ಶಿಕ್ಷಕರನ್ನು ನೇಮಿಸುವ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ ಎಂದು ತಿಳಿಸಿದರು.

ಪ್ರಕೃತಿ ವಿಕೋಪ ಹಾಗೂ ಇತರ ಸಮಸ್ಯೆಗಳಿಂದಾಗಿ ಹಾನಿಗೊಳಗಾದ ಶಾಲಾ ಕೊಠಡಿ ಹಾಗೂ ಕಟ್ಟಡದ ನಿರ್ಮಾಣಕ್ಕಾಗಿ ಈ ಬಾರಿ ಒಂದು ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಇನ್ನು ಅಧ್ಯಾಪಕರಿಗೆ ಸಮವಸ್ತ್ರ ಕಡ್ಡಾಯಗೊಳಿಸುವ ಚಿಂತನೆ ಸರ್ಕಾರದ ಮುಂದಿಲ್ಲ. ಆದರೆ ಕೆಲವು ಶಾಲೆಗಳಲ್ಲಿ ಅಧ್ಯಾಪಕರೂ ಸಮವಸ್ತ್ರವನ್ನು ಧರಿಸುತ್ತಿದ್ದು, ಇಂಥ ಶಾಲೆಗಳೂ‌ ಅತ್ಯುತ್ತಮವಾಗಿ ನಡೆಯುತ್ತಿವೆ ಎಂದು ಹೇಳಿದರು.

ಪುತ್ತೂರಿನ‌ ಹಾರಾಡಿ ಸರ್ಕಾರಿ ಶಾಲೆಯಲ್ಲಿ ನೂತನ‌ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮೆಕಾಲೆ ಶಿಕ್ಷಣ ಪದ್ಧತಿ ಮಕ್ಕಳನ್ನು‌‌ ಕೇವಲ‌ ಉದ್ಯೋಗದ ವಸ್ತುವನ್ನಾಗಿ ರೂಪಿಸುತ್ತಿದೆ. ಈ ವ್ಯವಸ್ಥೆಯನ್ನು ಬದಲಾಯಿಸುವ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದೆ. ಮಕ್ಕಳನ್ನು ಕೇಂದ್ರೀಕರಿಸಿ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ ಎಂದು ಹೇಳಿದರು.

ಓದಿ :ಬಿಜೆಪಿಯಲ್ಲಿ ಯಾವುದೇ ರೀತಿಯ ಬಣ ರಾಜಕಾರಣವಿಲ್ಲ: ಹನುಮಂತ ನಿರಾಣಿ

ABOUT THE AUTHOR

...view details