ಕರ್ನಾಟಕ

karnataka

ETV Bharat / city

ಮಳೆಯ ಆರ್ಭಟಕ್ಕೆ ಕುಸಿದ ಬೆಂಗಳೂರು-ಮಂಗಳೂರು ರಸ್ತೆ: ಗುಂಡ್ಯ ಚೆಕ್​ಪೋಸ್ಟ್​ನಲ್ಲಿ ವಾಹನಗಳು ಬ್ಲಾಕ್

ಸಕಲೇಶಪುರ ಸಮೀಪದ ದೋಣಿಗಲ್ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿಯುತ್ತಿದ್ದು, ಗುಂಡ್ಯ ಚೆಕ್​ಪೋಸ್ಟ್​ನಲ್ಲಿ ವಾಹನಗಳನ್ನು ತಡೆ ಹಿಡಿಯಲಾಗಿದೆ.

By

Published : Jul 22, 2021, 11:55 AM IST

Updated : Jul 22, 2021, 12:48 PM IST

National Highway collapse
ಗುಂಡ್ಯ ಚೆಕ್​ಪೋಸ್ಟ್​ನಲ್ಲಿ ವಾಹನಗಳು ಬ್ಲಾಕ್

ದಕ್ಷಿಣ ಕನ್ನಡ: ರಾಜ್ಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದಾಗಿಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೋಣಿಗಲ್ ಎಂಬಲ್ಲಿ ರಸ್ತೆ ಕುಸಿತ ಉಂಟಾಗಿದ್ದು, ಸಂಚಾರಕ್ಕೆ ತೊಡಕಾಗಿದೆ.

ಮಳೆಯ ಆರ್ಭಟಕ್ಕೆ ಕುಸಿದ ರಸ್ತೆ: ಗುಂಡ್ಯ ಚೆಕ್​ಪೋಸ್ಟ್​ನಲ್ಲಿ ವಾಹನಗಳು ಬ್ಲಾಕ್

ಸಕಲೇಶಪುರ ಸಮೀಪದ ದೋಣಿಗಲ್ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಕುಸಿಯುತ್ತಿದ್ದು, ಮಂಗಳೂರಿನಿಂದ ಗುಂಡ್ಯ ಮಾರ್ಗವಾಗಿ ಬೆಂಗಳೂರು ಸಂಚಾರಕ್ಕೆ ತಡೆ ಉಂಟಾಗಿದೆ. ಪ್ರಸ್ತುತ ಗುಂಡ್ಯ ಚೆಕ್​ಪೋಸ್ಟ್​ನಲ್ಲಿ ವಾಹನಗಳನ್ನು ತಡೆ ಹಿಡಿಯಲಾಗಿದ್ದು, ಬದಲಿ ಮಾರ್ಗವಾಗಿ ಸಂಚರಿಸುವ ಸ್ಥಿತಿ ಇದೆ.

ಗುಂಡ್ಯ ಚೆಕ್​ಪೋಸ್ಟ್​ನಲ್ಲಿ ವಾಹನಗಳು ಬ್ಲಾಕ್

ಮಡಿಕೇರಿ - ಸಂಪಾಜೆ ರಸ್ತೆಯೂ ಪೂರ್ಣ ಪ್ರಮಾಣದಲ್ಲಿ ಸರಿಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನುಳಿದಂತೆ ಚಾರ್ಮಾಡಿ ಘಾಟ್ ಮೂಲಕ ಹೆಚ್ಚಿನ ವಾಹನಗಳು ಸಂಚಾರ ಮಾಡಿದಲ್ಲಿ ವಾಹನ ದಟ್ಟಣೆ ಎದುರಾಗಿ, ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ:ನಾಗರ ಹಾವನ್ನೇ ನುಂಗಿದ ಕಾಳಿಂಗ ಸರ್ಪ: ಫೋಟೊ ವೈರಲ್

Last Updated : Jul 22, 2021, 12:48 PM IST

ABOUT THE AUTHOR

...view details