ಕರ್ನಾಟಕ

karnataka

ETV Bharat / city

ಮೆಸ್ಕಾಂ ವಿದ್ಯುತ್ ದರ ಏರಿಕೆ ಖಂಡಿಸಿ ಸಿಪಿಐಎಂ ಪ್ರತಿಭಟನೆ - undefined

ಇತ್ತೀಚಿನ ದಿನಗಳಲ್ಲಿ ಮೆಸ್ಕಾಂ, ರಾಜ್ಯದ ಜನತೆಗೆ ವಿಪರೀತವಾಗಿ ವಿದ್ಯುತ್ ಬೆಲೆ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಆರೋಪಿಸಿ ಮೆಸ್ಕಾಂನ ಪ್ರಧಾನ ಕಚೇರಿ ಮುಂಭಾಗ ಮಂಗಳೂರು ನಗರ ದಕ್ಷಿಣ ಸಮಿತಿಯ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ವಿದ್ಯುತ್ ದರ ಹೆಚ್ಚಳ ಖಂಡಿಸಿ ಮೆಸ್ಕಾಂ ಪ್ರಧಾನ ಕಚೇರಿ ಮುಂಭಾಗ ಪ್ರತಿಭಟನೆ

By

Published : Jul 19, 2019, 7:08 PM IST

ಮಂಗಳೂರು: ಮೆಸ್ಕಾಂ ನಿರಂತರವಾಗಿ ವರ್ಷಕ್ಕೆ ನಾಲ್ಕೈದು ಬಾರಿ ವಿದ್ಯುತ್ ದರ ಹೆಚ್ಚಳ ಮಾಡುತ್ತಿದ್ದು, ವಿಪರೀತ ವಿದ್ಯುತ್ ದರ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಸಮಿತಿಯ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಹೇಳಿದರು.

ವಿದ್ಯುತ್ ದರ ಹೆಚ್ಚಳ ಖಂಡಿಸಿ ಮೆಸ್ಕಾಂ ಪ್ರಧಾನ ಕಚೇರಿ ಮುಂಭಾಗ ಪ್ರತಿಭಟನೆ

ಇಂದು ಬೆಳಗ್ಗೆ ನಗರದ ಬಿಜೈನಲ್ಲಿರುವ ಮೆಸ್ಕಾಂನ ಪ್ರಧಾನ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿ ನಂತರ ಮಾತನಾಡಿದ ಅವರು, ಇಂದು ದಿನನಿತ್ಯದ ವಸ್ತುಗಳ ಬೆಲೆ ಗಗನಕ್ಕೇರಿದೆ. ಅದರ ಜೊತೆಗೆ ರಾಜ್ಯದ ಜನತೆಗೆ ವಿಪರೀತವಾಗಿ ವಿದ್ಯುತ್ ಬೆಲೆ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಇತ್ತೀಚಿನ ದಿನಗಳಲ್ಲಿ ಬೆಲೆ ಏರಿಕೆಯ ಬಗ್ಗೆ ಜನಸಾಮಾನ್ಯರಿಗೆ ಮಾಹಿತಿ ಕೊಡುತ್ತಿಲ್ಲ. ವರ್ಷಕ್ಕೆ ನಾಲ್ಕೈದು ಬಾರಿ ವಿದ್ಯುತ್ ದರ ಹೆಚ್ಚಳ ಮಾಡಲಾಗುತ್ತಿದೆ. ಕೆಲ ತಿಂಗಳುಗಳ ಹಿಂದೆ ಬರುತ್ತಿದ್ದ ವಿದ್ಯುತ್ ದರಕ್ಕೂ, ಈಗ ಬರುತ್ತಿರುವ ವಿದ್ಯುತ್ ದರಕ್ಕೂ ತುಂಬಾ ವ್ಯತ್ಯಾಸವಿದೆ. ಇದರಿಂದ ಜನಸಾಮಾನ್ಯರು ಮಾತ್ರವಲ್ಲ ಎಲ್ಲಾ ವಿಭಾಗದ ಮಂದಿ ಕಂಗೆಟ್ಟಿದ್ದಾರೆ ಎಂದರು.

ವಿದ್ಯುತ್ ಬಿಲ್​ಗಳಲ್ಲಿ ತಪ್ಪು ಲೆಕ್ಕಾಚಾರಗಳನ್ನು ಹಾಕಿ‌ ಜನರಿಂದ ಮೆಸ್ಕಾಂ ಸುಲಿಗೆ ಮಾಡುತ್ತಿದೆ. ಇದನ್ನು ಖಂಡಿಸಿ ಮೆಸ್ಕಾಂನ ಒಂದೊಂದು ಉಪ ಕಚೇರಿಯ ಮುಂಭಾಗವೂ ಪ್ರತಿಭಟನೆ ನಡೆಸಲಾಗುತ್ತದೆ. ಅಧಿಕಾರಿಗಳು ಈ ಬಗ್ಗೆ ಸ್ಪಷ್ಟವಾದ ಮಾಹಿತಿ ಕೊಡಬೇಕು ಎಂದು ಸುನೀಲ್ ಕುಮಾರ್ ಬಜಾಲ್ ಆಗ್ರಹಿಸಿದರು.

ಈ ಸಂದರ್ಭ ದಯಾನಂದ ಶೆಟ್ಟಿ, ಬಶೀರ್, ಅಜ್ಗರ್, ಜಯಂತಿ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

For All Latest Updates

TAGGED:

ABOUT THE AUTHOR

...view details