ಪುತ್ತೂರು: ಬೀದಿ ಬದಿಯಲ್ಲಿ ಭಿಕ್ಷೆ ಬೇಡಿ ಬದುಕುತ್ತಿದ್ದ 8 ಮಂದಿಯನ್ನು ನಗರದ ನೆಲ್ಲಿಕಟ್ಟೆ ಪ್ರಾಥಮಿಕ ಶಾಲೆಗೆ ನಗರಸಭಾ ಪೌರಾಯುಕ್ತೆ ರೂಪಾ ಶೆಟ್ಟಿ ನೇತೃತ್ವದಲ್ಲಿ ಸ್ಥಳಾಂತರ ಮಾಡಲಾಯಿತು.
ಭಿಕ್ಷುಕರಿಗೆ ಸರ್ಕಾರಿ ಶಾಲೆಯಲ್ಲಿ ಊಟ ಕೊಟ್ಟು ಆಶ್ರಯ ನೀಡಿದ ಪುತ್ತೂರು ನಗರಸಭೆ! - ನಗರಸಭಾ ಪೌರಾಯುಕ್ತೆ ರೂಪಾ ಶೆಟ್ಟಿ
ಪುತ್ತೂರು ನಗರದ ಎಂ.ಟಿ ರಸ್ತೆಯ ಅಂಗಡಿ ಭಾಗದಲ್ಲಿ ಇವರು ಭಿಕ್ಷೆ ಬೇಡಿ ಹಲವು ವರ್ಷಗಳಿಂದ ಬದುಕುತ್ತಿದ್ದರು. ಕೊರೊನಾ ಲಾಕ್ಡೌನ್ ಪರಿಣಾಮ ಇವರಿಗೆ ದಿನದ ತುತ್ತಿಗೂ ಕಷ್ಟವಾಗಿತ್ತು.
![ಭಿಕ್ಷುಕರಿಗೆ ಸರ್ಕಾರಿ ಶಾಲೆಯಲ್ಲಿ ಊಟ ಕೊಟ್ಟು ಆಶ್ರಯ ನೀಡಿದ ಪುತ್ತೂರು ನಗರಸಭೆ! putur-municipality-providing-shelter-government-school](https://etvbharatimages.akamaized.net/etvbharat/prod-images/768-512-6844520-614-6844520-1587214309026.jpg)
ಪುತ್ತೂರು ನಗರದ ಎಂ.ಟಿ ರಸ್ತೆಯ ಅಂಗಡಿ ಭಾಗದಲ್ಲಿ ಇವರು ಭಿಕ್ಷೆ ಬೇಡಿ ಹಲವು ವರ್ಷಗಳಿಂದ ಬದುಕುತ್ತಿದ್ದರು. ಕೊರೊನಾ ಲಾಕ್ಡೌನ್ ಪರಿಣಾಮ ಇವರಿಗೆ ದಿನದ ತುತ್ತಿಗೂ ಕಷ್ಟವಾಗಿತ್ತು. ಈ ಸಂದರ್ಭದಲ್ಲಿ ಪುತ್ತೂರು ಮೆಸ್ಕಾಂ ಇಲಾಖೆಯ ಆಶ್ರಫ್ ಅವರ ತಂಡದಿಂದ ದಿನವೂ ಆಹಾರ ನೀಡುವ ಕೆಲಸ ನಡೆಯುತ್ತಿತ್ತು. ಆದರೆ ಮಳೆ ಆರಂಭವಾದ ಹಿನ್ನೆಲೆ ಇವರನ್ನು ಸ್ಥಳಾಂತರ ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್, ನಗರಸಭಾ ಪೌರಾಯುಕ್ತರಿಗೆ ತಿಳಿಸಿದ್ದರು.
ಈ ಹಿನ್ನೆಲೆ ಅಲ್ಲಿದ್ದ 8 ಮಂದಿಯನ್ನು ಇದೀಗ ನೆಲ್ಲಿಕಟ್ಟೆ ಪ್ರಾಥಮಿಕ ಶಾಲೆಗೆ ಸ್ಥಳಾಂತರ ಮಾಡಲಾಗಿದೆ. ಈ ಶಾಲೆಯ ಒಂದು ಕೋಣೆಯನ್ನು ಇವರಿಗಾಗಿ ತೆರವು ಮಾಡಲಾಗಿದೆ. ನೀರು ಹಾಗೂ ಶೌಚಾಲಯದ ವ್ಯವಸ್ಥೆಯನ್ನೂ ಮಾಡಲಾಗಿದೆ. ಇವರಿಗೆ ಊಟ-ಕಾಫಿ ವ್ಯವಸ್ಥೆಯನ್ನು ಮೆಸ್ಕಾಂ ಇಲಾಖೆಯಿಂದ ಮಾಡಲಾಗುವುದು. ಉಳಿದ ಸೌಕರ್ಯಗಳನ್ನು ನಗರಸಭೆ ಆಡಳಿತದ ಮೂಲಕ ಮಾಡಿ ಕೊಡಲಾಗುವುದು ಎಂದು ಪೌರಾಯುಕ್ತೆ ರೂಪಾ ಶೆಟ್ಟಿ ತಿಳಿಸಿದರು.