ಕರ್ನಾಟಕ

karnataka

ETV Bharat / city

ಬೆಳ್ತಂಗಡಿಯಲ್ಲಿ ಡೆಂಗ್ಯೂ ಜ್ವರಕ್ಕೆ ಎರಡನೇ ಬಲಿ ? - Mangalore latest news

ಜ್ವರದಿಂದ ಬಳಲುತ್ತಿದ್ದ ವ್ಯಕ್ತಿ, ಸ್ಥಳೀಯ ಖಾಸಗಿ ವೈದ್ಯರಲ್ಲಿಗೆ ಜೂ.23ರಂದು ಚಿಕಿತ್ಸೆಗೆ ಹೋದಾಗ ಆ ವೈದ್ಯರು ಮಂಗಳೂರಿಗೆ ಕಳುಹಿಸಿದ್ದರು. ಆದರೆ, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ್ದಾರೆ.

Second death by dengue in Belthangady ?
ಬೆಳ್ತಂಗಡಿಯಲ್ಲಿ ಡೆಂಗ್ಯೂ ಜ್ವರಕ್ಕೆ ಎರಡನೇ ಬಲಿ

By

Published : Jun 25, 2020, 2:59 AM IST

ಬೆಳ್ತಂಗಡಿ (ದಕ್ಷಿಣ ಕನ್ನಡ): ನಗರದಲ್ಲಿ ಶಂಕಿತ ಡೆಂಗ್ಯೂ ಜ್ವರಕ್ಕೆ ವ್ಯಕ್ತಿಯೋರ್ವರು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

ಕೇಳ್ತಾಜೆ ನಿವಾಸಿ ಸಂಜೀವ ಗೌಡ(48) ಶಂಕಿತ ಡೆಂಗ್ಯೂ ಜ್ವರದಿಂದ ಬಳಲಿ ಜೂ.23ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ ಇವರು, ಸ್ಥಳೀಯ ಖಾಸಗಿ ವೈದ್ಯರಲ್ಲಿಗೆ ಜೂ.23ರಂದು ಚಿಕಿತ್ಸೆಗೆ ಹೋದಾಗ ಆ ವೈದ್ಯರು ಮಂಗಳೂರಿಗೆ ಕಳುಹಿಸಿದ್ದರು. ಆದರೆ, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ್ದಾರೆ.

ಕನ್ಯಾಡಿ ಗ್ರಾಮದ ಕೇಳ್ತಾಜೆ, ನಾವೂರು ಹಾಗೂ ಇಂದಬೆಟ್ಟು ಗ್ರಾಮದಲ್ಲಿ ಡೆಂಗ್ಯೂ ಜ್ವರದಿಂದ ಆನೇಕ ಮಂದಿ ಬಳಲುತ್ತಿದ್ದು, ಆರೋಗ್ಯ ಇಲಾಖೆ ಇದರ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ.

ABOUT THE AUTHOR

...view details