ಕರ್ನಾಟಕ

karnataka

By

Published : Jun 7, 2019, 9:48 PM IST

ETV Bharat / city

ಅತ್ತಾವರದ ಪೇಯಿಂಗ್‌ ಗೆಸ್ಟ್‌ನಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ: ಕೊಲೆ ಶಂಕೆ

ಅತ್ತಾವರದಲ್ಲಿರುವ ಮೆಡಿಕಲ್ ಕಾಲೇಜು ಬಳಿಯ ಪೇಯಿಂಗ್ ಗೆಸ್ಟ್​ನ ರೂಂನಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು,ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ವಿದ್ಯಾರ್ಥಿನಿಯ ಮೃತದೇಹ ಪತ್ತೆ

ಮಂಗಳೂರು:ವಿದ್ಯಾರ್ಥಿನಿಯೋರ್ವಳ ಮೃತದೇಹ ನಗರದ ಅತ್ತಾವರದ ಮನೆಯೊಂದರಲ್ಲಿ ಪತ್ತೆಯಾಗಿದ್ದು, ಪೊಲೀಸರು ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮಂಜುನಾಥ ವೈ.ಎನ್ ಎಂಬವರ ಪುತ್ರಿ ಅಂಜನಾ ವಶಿಷ್ಠ ಕೊಲೆಯಾಗಿರುವ ವಿದ್ಯಾರ್ಥಿನಿ.

ಅತ್ತಾವರದಲ್ಲಿರುವ ಮೆಡಿಕಲ್ ಕಾಲೇಜು ಬಳಿಯ ಪೆಯೀಂಗ್ ಗೆಸ್ಟ್​ನ ರೂಂನಲ್ಲಿ ಮೃತ ದೇಹ ಪತ್ತೆಯಾಗಿದೆ. ಅಂಜನಾ ವಶಿಷ್ಠರ ತಲೆ ಮಂಚದ ಸರಳಿನ ನಡುವೆ ಸಿಲಿಕಿದ್ದು, ಈ ಹಿನ್ನೆಲೆಯಲ್ಲಿ ಯಾರೋ ಕೊಲೆ ಮಾಡಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಆಧಾರ್ ಕಾರ್ಡ್ ಮುಖಾಂತರ ವಿದ್ಯಾರ್ಥಿ ಗುರುತು ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಸ್ಥಳ ಮಹಜರು ಮಾಡಿದ್ದಾರೆ. ಜೊತೆಗೆ ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

For All Latest Updates

TAGGED:

ABOUT THE AUTHOR

...view details