ಕರ್ನಾಟಕ

karnataka

ETV Bharat / city

ಮಂಗಳೂರಲ್ಲಿ ಇನ್ಮುಂದೆ ನೋ ಪಾರ್ಕಿಂಗ್​ನಲ್ಲಿ ವಾಹನ ನಿಲ್ಸಿದ್ರೆ ಜೋಕೆ: ಕಮಿಷನರ್​ ವಾರ್ನಿಂಗ್​ - ಟ್ರಾಫಿಕ್ ಜಾಮ್ ಸಮಸ್ಯೆ

ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಪೊಲೀಸ್ ಫೋನ್ ಇನ್ ಕಾರ್ಯಕ್ರಮ ನಡೆದಿದ್ದು, ಈ ವೇಳೆ ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದ್ರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್ ಹರ್ಷ ಹೇಳಿದರು.

ಡಾ. ಪಿ.ಎಸ್ ಹರ್ಷ

By

Published : Aug 16, 2019, 7:57 PM IST

ಮಂಗಳೂರು: ಕಾನೂನಿನ ಮುಂದೆ ಎಲ್ಲರೂ ಸಮಾನರು. ಹಾಗಾಗಿ ಯಾರಾದ್ರು ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಿದ್ರೆ ಖಂಡಿತ ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್ ಹರ್ಷ ಹೇಳಿದರು.

ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಫೋನ್ ಇನ್ ಕಾರ್ಯಕ್ರಮ

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಡೀಲ್ ಕ್ರಾಸ್​ನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿದೆ. ಹಾಗೂ ಲೈಸೆನ್ಸ್ ಇಲ್ಲದೆ ವಾಹನ ಚಾಲನೆ, ಶಬ್ದ ಮಾಲಿನ್ಯ, ರಸ್ತೆಯಲ್ಲಿ ವಾಹನ ಪಾರ್ಕಿಂಗ್ ಮಾಡುವುದರಿಂದ ತೊಂದರೆ ಉಂಟಾಗುತ್ತಿದ್ದು, ಇನ್ನು ಮುಂದೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನು ಈ ವೇಳೆ ಹಂಪನಕಟ್ಟೆ ಬಳಿ ವೃದ್ಧರೋರ್ವರು ಮೂರ್ನಾಲ್ಕು ತಿಂಗಳುಗಳಿಂದ ರಸ್ತೆ ಬದಿಯಲ್ಲೇ ಇದ್ದಾರೆ. ಅವರಿಗೆ ನಿರ್ಗತಿಕರ ಕೇಂದ್ರದಲ್ಲಿ ವಾಸ್ತವ್ಯ ವ್ಯವಸ್ಥೆ ಮಾಡಬೇಕೆಂದು ವ್ಯಕ್ತಿಯೋರ್ವರು ಕರೆ ಮಾಡಿದರು‌. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತರು, ಪಚ್ಚನಾಡಿಯ ನಿರ್ಗತಿಕರ ಕೇಂದ್ರದಲ್ಲಿ ವೃದ್ಧರಿಗೆ ವ್ಯವಸ್ಥೆ ಮಾಡುವ ಭರವಸೆ ನೀಡಿದರು.

ಈ ಸಂದರ್ಭ ಉಪ ಪೊಲೀಸ್ ಆಯುಕ್ತರಾದ ಡಾ.ಅರುಣಾಂಶ ಗಿರಿ, ಲಕ್ಷ್ಮೀ ಗಣೇಶ್, ಎಸಿಪಿ ಮಂಜುನಾಥ ಶೆಟ್ಟಿ ಮತ್ತಿತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details