ಕರ್ನಾಟಕ

karnataka

ETV Bharat / city

ಉಳ್ಳಾಲದಲ್ಲಿ ಶಿಕ್ಷಕಿ ಮೃತದೇಹ ಬಾವಿಯಲ್ಲಿ ಪತ್ತೆ

ಲಿಟಲ್ ಹಾರ್ಟ್ ಕಿಂಡರ್ ಗಾರ್ಟನ್ ಸಂಸ್ಥೆಯ ಮಾಲೀಕರು ಹಾಗೂ ಶಿಕ್ಷಕಿ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದೆ.

By

Published : Aug 13, 2022, 10:13 AM IST

Updated : Aug 13, 2022, 10:21 AM IST

ಉಳ್ಳಾಲದಲ್ಲಿ ಶಿಕಕಿ ಮೃತದೇಹ ಬಾವಿಯಲ್ಲಿ ಪತ್ತೆ
ಉಳ್ಳಾಲದಲ್ಲಿ ಶಿಕಕಿ ಮೃತದೇಹ ಬಾವಿಯಲ್ಲಿ ಪತ್ತೆ

ಮಂಗಳೂರು:ಉಳ್ಳಾಲದ ಅಬ್ಬಕ್ಕ ಸರ್ಕಲ್‌ನಲ್ಲಿ ಇರುವ ಲಿಟಲ್ ಹಾರ್ಟ್ ಕಿಂಡರ್ ಗಾರ್ಟನ್ ಸಂಸ್ಥೆಯ ಮಾಲೀಕರು ಹಾಗೂ ಶಿಕ್ಷಕಿ ಮೃತದೇಹ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದೆ. ಹರಿಣಾಕ್ಷಿ ಮೃತಪಟ್ಟವರು. ಇವರಿಗೆ 50 ವರ್ಷ ವಯಸ್ಸಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಶುಕ್ರವಾರ ಬೆಳಗ್ಗೆ ನಾಪತ್ತೆಯಾಗಿದ್ದ ಹರಿಣಾಕ್ಷಿ ಅವರನ್ನು ಇಬ್ಬರು ಪುತ್ರರು ಮನೆ ಸಮೀಪ ಹುಡುಕಾಡಿ ಬಳಿಕ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಉಳ್ಳಾಲ ಪೊಲೀಸರು ಹುಡುಕಾಟ ನಡೆಸಿದಾಗ ಮಧ್ಯಾಹ್ನದ ವೇಳೆ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಳಿ ಇವರ ಪಾದರಕ್ಷೆಗಳು ಪತ್ತೆಯಾಗಿದ್ದವು. ನಂತರ ಅಲ್ಲೇ ಇದ್ದ ಬಾವಿಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಈಜುಗಾರರ ಮೂಲಕ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಸುಮಾರು 30 ಅಡಿ ಅಳದ ಬಾವಿಯಿಂದ ಮೃತದೇಹ ಮೇಲೆತ್ತಲಾಗಿದೆ.

ಹರಿಣಾಕ್ಷಿ ಅವರು ಕೆಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದರು. ಅವರು ಮನೆಯಲ್ಲೇ ನರ್ಸರಿ, ಯುಕೆಜಿ ಹಾಗೂ ಟ್ಯೂಷನ್ ತರಗತಿ ನಡೆಸುತ್ತಿದ್ದರು. ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಇದನ್ನು ಓದಿ:ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Last Updated : Aug 13, 2022, 10:21 AM IST

ABOUT THE AUTHOR

...view details