ಕರ್ನಾಟಕ

karnataka

ETV Bharat / city

ತುಂಬೆ ಡ್ಯಾಂನ ಟ್ರಾನ್ಸ್ ಫಾರ್ಮರ್‌ಗೆ ಸಿಡಿಲು: ಮಂಗಳೂರಿನಲ್ಲಿ ದಿನ ಬಿಟ್ಟು ದಿನ ನೀರು ಸರಬರಾಜು - undefined

ನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಂನ ಟ್ರಾನ್ಸ್ ಫಾರ್ಮರ್‌ಗೆ ಸಿಡಿಲು ಬಡಿದು ಹಾನಿಯಾಗಿದ್ದು, ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ನಗರಕ್ಕೆ ದಿನ ಬಿಟ್ಟು ದಿನ ನೀರು ಸರಬರಾಜು ಆಗಲಿದೆ

ಮಂಗಳೂರಿನಲ್ಲಿ ದಿನ ಬಿಟ್ಟು ದಿನ ನೀರು ಸರಬರಾಜು

By

Published : Jun 14, 2019, 6:22 AM IST

ಮಂಗಳೂರು:ನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಂನ ಟ್ರಾನ್ಸ್ ಫಾರ್ಮರ್‌ಗೆ ಸಿಡಿಲು ಬಡಿದು ಹಾನಿಯಾಗಿದ್ದು, ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ನಗರಕ್ಕೆ ದಿನ ಬಿಟ್ಟು ದಿನ ನೀರು ಸರಬರಾಜು ಆಗಲಿದೆ ಎಂದು ಮಹಾನಗರಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಬೆಳಗ್ಗೆ ನಗರದಲ್ಲಿ ಸುರಿದ ಗುಡುಗು ಸಹಿತ ಮಳೆಗೆ ಪಡೀಲ್‌ನಲ್ಲಿರುವ ನೆಲಮಟ್ಟದ ಮುಖ್ಯ ಜನಸಂಗ್ರಹಾಗಾರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಉತ್ತುಂಗ ಸ್ಥಾವರ ನಂಬರ್-2ಕ್ಕೆ ವಿದ್ಯುತ್ ಪೂರೈಕೆ ಮಾಡುವ ಟ್ರಾನ್ಸ್ ಫಾರ್ಮರ್‌ಗೆ ಸಿಡಿಲಿನಿಂದ ಹಾನಿಯಾಗಿದೆ.

ತುಂಬೆ ಡ್ಯಾಂನ ಟ್ರಾನ್ಸ್ ಫಾರ್ಮರ್‌ಗೆ ಸಿಡಿಲು
ತುರ್ತಾಗಿ ದುರಸ್ತಿ ಮಾಡುವ ಕಾರ್ಯಪ್ರಗತಿಯಲ್ಲಿದ್ದು, ಕಾರ್ಯ ಮುಗಿಯುವವರೆಗೆ ನಗರ ವ್ಯಾಪ್ತಿ ಮತ್ತು ಸುರತ್ಕಲ್ ಪ್ರದೇಶಗಳನ್ನು ಎರಡು ವಿಭಾಗಗಳಾಗಿ ವಿಂಗಡಿಸಿ ಪ್ರತಿ ವಿಭಾಗಕ್ಕೆ ದಿನ ಬಿಟ್ಟು ದಿನ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details