ಕರ್ನಾಟಕ

karnataka

By

Published : Jan 28, 2021, 10:20 AM IST

ETV Bharat / city

ಸುರತ್ಕಲ್​ನಲ್ಲಿ ಯುವಕನಿಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು

ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕನೊಬ್ಬನಿಗೆ ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು, ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ.

Young man was stabbed with a knife
ಸುರತ್ಕಲ್​ನಲ್ಲಿ ಯುವಕನಿಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು

ಮಂಗಳೂರು:ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು, ಯುವಕನೊಬ್ಬನಿಗೆ ಚೂರಿಯಿಂದ ಇರಿದಿರುವ ಘಟನೆ ಸುರತ್ಕಲ್​​ನ ಗಣೇಶಪುರದಲ್ಲಿ ನಡೆದಿದೆ.

ಸುರತ್ಕಲ್​ನ ಜಾಬೀರ್ ಎಂಬಾತನಿಗೆ ಚೂರಿಯಿಂದ ಇರಿಯಲಾಗಿದೆ. ಜಾಬೀರ್ ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು, ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಜಾಬೀರ್​ನನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ.

ಓದಿ:ಬಾರ್ ಹೊರಗೆ ನಿಂತಿದ್ದ ಗೆಳೆಯರಿಬ್ಬರಿಗೆ ಚಾಕು ಇರಿತ: ಓರ್ವ ಸಾವು

ಘಟನೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ABOUT THE AUTHOR

...view details