ಮೈಸೂರು: ಕೋವಿಡ್-19 ಭೀತಿ ಹಿನ್ನೆಲೆಯಲ್ಲಿ ಮೈಸೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ (ಎಪಿಎಂಸಿ) ಕೊರೊನಾ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಇನ್ಸ್ಪೆಕ್ಷನ್ ಟನಲ್ ನಿರ್ಮಿಸಲಾಗಿದೆ.
ಇಲ್ಲಿನ ಬಂಡಿಪಾಳ್ಯದ ಉತ್ತನಹಳ್ಳಿ ಮತ್ತು ನಂಜನಗೂಡು ರಸ್ತೆಯ ಎಪಿಎಂಸಿ ಎರಡು ಮುಖ್ಯ ದ್ವಾರಗಳಲ್ಲಿ ಟನಲ್ ನಿರ್ಮಾಣ ಮಾಡಲಾಗಿದೆ. ಮಾರುಕಟ್ಟೆ ಪ್ರವೇಶಿಸುವ ಸಾರ್ವಜನಿಕರಿಗೂ ದ್ರಾವಣ ಸಿಂಪಡಿಸಲಾಗುತ್ತಿದೆ. ಅಲ್ಲದೆ, ಎಲ್ಲರನ್ನೂ ಪೊಲೀಸರು ತಪಾಸಣೆ ಮಾಡಿಯೇ ಒಳ ಬಿಡುತ್ತಿದ್ದಾರೆ. ಪಾಸ್ ಇದ್ದವರಿಗೆ ಮಾತ್ರ ಅವಕಾಶ ನೀಡಲಾಗಿದೆ.