ಕರ್ನಾಟಕ

karnataka

ETV Bharat / city

ಕೊರೊನಾ ವೈರಸ್ ಎಫೆಕ್ಟ್.. ನಾಳೆಯಿಂದ ಮಾ.23ರವರೆಗೆ ರಾಜ್ಯದ ಎಲ್ಲಾ ಮೃಗಾಲಯಗಳು ಬಂದ್! - ಮೈಸೂರಿನ ಪ್ರವಾಸಿ ತಾಣಗಳು ಪ್ರವಾಸಿಗರಿಲ್ಲದೇ ಬಿಕೋ ಎನ್ನುತ್ತಿದೆ

ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ವಾರ ಮಾಲ್, ಥಿಯೇಟರ್, ಕ್ಲಬ್ ಸೇರಿದಂತೆ ಸಾರ್ವಜನಿಕರು ಸೇರುವ ಸ್ಥಳಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಿದೆ. ಇದರಿಂದ ಮೈಸೂರಿನ ಪ್ರವಾಸಿ ತಾಣಗಳು ಪ್ರವಾಸಿಗರಿಲ್ಲದೆ ಬೀಕೋ ಎನ್ನುತ್ತಿವೆ.

KN_MYS_04_Zoo_leave_vis_KA10003
ಕೊರೊನಾ ವೈರಸ್ ಎಫೆಕ್ಟ್: ನಾಳೆಯಿಂದ ಮಾ.23ರವರೆಗೆ ರಾಜ್ಯದ ಎಲ್ಲಾ ಮೃಗಾಲಯಗಳು ಬಂದ್...!

By

Published : Mar 14, 2020, 9:33 PM IST

ಮೈಸೂರು/ಚಾಮರಾಜನಗರ: ಕೊರೊನಾ ವೈರಸ್ ಹಿನ್ನೆಲೆ ರಾಜ್ಯದ ಮೃಗಾಲಯಗಳನ್ನು ಮಾ.15 ರಿಂದ 23ರವರೆಗೆ ಬಂದ್ ಮಾಡುವಂತೆ ಕರ್ನಾಟಕ ಮೃಗಾಲಯ ಪ್ರಾಧಿಕಾರ ಆದೇಶ ಹೊರಡಿಸಿದೆ.

ಮೈಸೂರು, ಬನ್ನೇರುಘಟ್ಟ, ಶಿವಮೊಗ್ಗ, ಗದಗ, ಚಿತ್ರದುರ್ಗ, ಬೆಳಗಾವಿ, ಕಲಬುರ್ಗಿ ಹಾಗೂ ಹಂಪಿಯಲ್ಲಿರುವ ಮೃಗಾಲಯಗಳನ್ನು ಬಂದ್ ಮಾಡಿ ಸಾರ್ವಜನಿಕರ ಆರೋಗ್ಯಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ವಾರ ಮಾಲ್, ಥಿಯೇಟರ್, ಕ್ಲಬ್ ಸೇರಿದಂತೆ ಸಾರ್ವಜನಿಕರು ಸೇರುವ ಸ್ಥಳಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಿದೆ. ಇದರಿಂದ ಮೈಸೂರಿನ ಪ್ರವಾಸಿ ತಾಣಗಳು ಪ್ರವಾಸಿಗರಿಲ್ಲದೇ ಬೀಕೋ ಎನ್ನುತ್ತಿವೆ.

ಕೊರೊನಾ ವೈರಸ್ ಎಫೆಕ್ಟ್.. ನಾಳೆಯಿಂದ ಮಾ.23ರವರೆಗೆ ರಾಜ್ಯದ ಎಲ್ಲಾ ಮೃಗಾಲಯಗಳು ಬಂದ್!
ಬಂಡೀಪುರ ರಾಷ್ಟ್ರೀಯ ಉದ್ಯಾನವನ ಪ್ರವೇಶಕ್ಕೆ ನಿರ್ಬಂಧ:ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಹಾಗೂ ಅದರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹೋಟೆಲ್ ಹಾಗೂ ರೆಸಾರ್ಟ್‍ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ಎಂ ಆರ್ ರವಿ ಅವರು ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details