ಕರ್ನಾಟಕ

karnataka

By

Published : Aug 15, 2019, 4:57 PM IST

ETV Bharat / city

ಆಸ್ಪತ್ರೆಯಲ್ಲಿ ಗೃಹಿಣಿ ಸಾವು: ವೈದ್ಯರ ವಿರುದ್ಧ ಪೋಷಕರ ಆಕ್ರೋಶ

ಗೃಹಿಣಿಯೋರ್ವರು ಪೋಷಕರ ಮುಂದೆಯೇ ಸಾವನ್ನಪ್ಪಿರುವ ಘಟನೆ ಕೆ.ಆರ್. ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ವಿರುದ್ಧ ಮೃತಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆ.ಆರ್ ಆಸ್ಪತ್ರೆಯಲ್ಲಿ ಗೃಹಿಣಿ ಸಾವು

ಮೈಸೂರು: ಗೃಹಿಣಿಯೋರ್ವರು ಪೋಷಕರ ಮುಂದೆಯೇ ಸಾವನ್ನಪ್ಪಿರುವ ಘಟನೆ ಕೆ.ಆರ್. ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ವಿರುದ್ಧ ಮೃತಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆ.ಆರ್. ಆಸ್ಪತ್ರೆಯಲ್ಲಿ ಗೃಹಿಣಿ ಸಾವು: ಪೋಷಕರ ಆಕ್ರೋಶ

ಹೆಚ್.ಡಿ ಕೋಟೆ ತಾಲೂಕಿನ ಮಾದಾಪುರ ಗ್ರಾಮದ ಶಿಲ್ಪ (25) ಮೃತ ಗೃಹಿಣಿ. ನಿನ್ನೆ ರಾತ್ರಿ ಈಕೆಯನ್ನು ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಪೆಂಡಿಕ್ಸ್‌ ಕಾಯಿಲೆಯಿಂದ ನರಳುತ್ತಿದ್ದ ಇವರಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರ ಕೊರತೆಯಿದ್ದ ಹಿನ್ನೆಲೆ ಮೃತಪಟ್ಟಿದ್ದಾಳೆ ಎಂದು ಮೃತಳ ಸಂಬಂಧಿಕರು, ಪೋಷಕರು ಆಸ್ಪತ್ರೆಯ ಆವರಣದಲ್ಲಿ ಮೃತದೇಹವನ್ನು ಇಟ್ಟು ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details