ಕರ್ನಾಟಕ

karnataka

By

Published : Mar 5, 2021, 12:52 PM IST

ETV Bharat / city

ಮೈಸೂರು ಮೇಯರ್ ಆಯ್ಕೆ: ತನ್ವೀರ್ ಸೇಠ್ ಬೆಂಬಲಕ್ಕೆ ನಿಂತ ಎಚ್​ಡಿಕೆ, ಪರೋಕ್ಷವಾಗಿ ಜೆಡಿಎಸ್​​ಗೆ ಆಹ್ವಾನ!

ಮೇಯರ್ ಚುನಾವಣೆಯಲ್ಲಿ ಬಿಜೆಪಿಯನ್ನು ಹೊರಗಿಡುವ ಉದ್ದೇಶದಿಂದ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ತನ್ವೀರ್ ಸೇಠ್ ತಬ್ಬಲಿ ಮಾಡಲು ಅವರ ಪಕ್ಷದವರು ಮುಂದಾದರೆ ನಾನು ಬಿಡುವುದಿಲ್ಲ. ಅವರ ಬೆನ್ನಿಗೆ ನಾನು ನಿಲ್ಲುತ್ತೇನೆ ಎಂದು ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ.

HD Kumaraswamy
ಹೆಚ್​ಡಿ ಕುಮಾರಸ್ವಾಮಿ

ಮೈಸೂರು: ಮೇಯರ್ ಆಯ್ಕೆ ಸಂಬಂಧ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ತನ್ವೀರ್ ಸೇಠ್ ಅವರ ವಿರುದ್ಧ ತಿರುಗಿ ಬಿದ್ದಿದ್ದು, 'ತನ್ವೀರ್ ಅವರ ಬೆಂಬಲಕ್ಕೆ ನಾವು ನಿಲ್ಲುತ್ತೇವೆ' ಎನ್ನುವ ಮೂಲಕ ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ ಜೆಡಿಎಸ್​​ಗೆ ಪರೋಕ್ಷವಾಗಿ ಆಹ್ವಾನಿಸಿದ್ದಾರೆ.

ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೇಯರ್ ಚುನಾವಣೆಯಲ್ಲಿ ಬಿಜೆಪಿಯನ್ನು ಹೊರಗಿಡುವ ಉದ್ದೇಶದಿಂದ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ತನ್ವೀರ್ ಸೇಠ್ ತಬ್ಬಲಿ ಮಾಡಲು ಅವರ ಪಕ್ಷದವರು ಮುಂದಾದರೆ ನಾನು ಬಿಡುವುದಿಲ್ಲ. ಅವರ ಬೆನ್ನಿಗೆ ನಾನು ನಿಲ್ಲುತ್ತೇನೆ ಎಂದರು.

ಶಾಸಕ ತನ್ವೀರ್ ಸೇಠ್ ಅವರನ್ನು ಸೋಲಿಸಲು ಚುನಾವಣೆ ಸಂದರ್ಭದಲ್ಲಿ ನಾವು ಯತ್ನಿಸಿದ್ದೇವೆ. ಕ್ಷೇತ್ರದಲ್ಲಿ ತಮ್ಮದೆಯಾದ ವರ್ಚಸ್ಸು ಹೊಂದಿದ್ದರಿಂದ ಅವರನ್ನು ಸೋಲಿಸಲು ಆಗುವುದಿಲ್ಲ. ಕೋಮುವಾದಿ-ಜಾತ್ಯತೀತ ಅಂತ ಹೇಳಿಕೆ ನೀಡುತ್ತಾರೆ. ಆದರೆ, ಅವರು ಹೇಗೆ ನಡೆದುಕೊಳ್ಳುತ್ತಾರೆ ಎನ್ನುವುದು ಗೊತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯರಿಗೆ ತಿರುಗೇಟು ನೀಡಿದರು.

ABOUT THE AUTHOR

...view details