ಮೈಸೂರು: ಅಪಹರಣಗೊಂಡಿದ್ದ ನಗರದ ಬೆಮಲ್ ಬಡಾವಣೆಯ ವೈದ್ಯ ದಂಪತಿಯ ಪುತ್ರನನ್ನು ಪೊಲೀಸರು ಚಾಣಾಕ್ಷತೆಯಿಂದ ರಕ್ಷಿಸಿರುವ ಘಟನೆ ಕುವೆಂಪು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವೈದ್ಯ ದಂಪತಿ ಮಗನ ಕಿಡ್ನಾಪ್ ಪ್ರಕರಣ: ಚಾಣಾಕ್ಷತನದಿಂದ ಬಾಲಕನ ರಕ್ಷಣೆ - ಕುವೆಂಪು ನಗರ ಪೊಲೀಸ್ ಠಾಣೆ
ಮೈಸೂರು ನಗರದ ಬೆಮಲ್ ಬಡಾವಣೆಯ ರಸ್ತೆ ಮೇಲೆ ಸೈಕಲ್ನಲ್ಲಿ ಆಟವಾಡುತ್ತಿದ್ದ 12 ವರ್ಷದ ವೈದ್ಯ ದಂಪತಿಯ ಮಗನನ್ನು ನೀಲಿ ಬಣ್ಣದ ಕಾರಿನಲ್ಲಿ ಬಂದ ಅಪಹರಣಕಾರರು ನಿನ್ನೆ ಕಿಡ್ನಾಪ್ ಮಾಡಿದ್ದರು. ಇದೀಗ ಪೊಲೀಸರು ಚಾಣಾಕ್ಷತೆಯಿಂದ ಬಾಲಕನನ್ನು ರಕ್ಷಿಸಿದ್ದಾರೆ.
![ವೈದ್ಯ ದಂಪತಿ ಮಗನ ಕಿಡ್ನಾಪ್ ಪ್ರಕರಣ: ಚಾಣಾಕ್ಷತನದಿಂದ ಬಾಲಕನ ರಕ್ಷಣೆ ವೈದ್ಯ ದಂಪತಿ ಮಗನ ಕಿಡ್ನಾಪ್ ಪ್ರಕರಣ](https://etvbharatimages.akamaized.net/etvbharat/prod-images/768-512-15643066-thumbnail-3x2-kidnap.jpg)
ವೈದ್ಯ ದಂಪತಿ ಮಗನ ಕಿಡ್ನಾಪ್ ಪ್ರಕರಣ
ನಿನ್ನೆ ರಸ್ತೆ ಮೇಲೆ ಸೈಕಲ್ನಲ್ಲಿ ಆಟವಾಡುತ್ತಿದ್ದ 12 ವರ್ಷದ ವೈದ್ಯ ದಂಪತಿ ಮಗನನ್ನು ನೀಲಿ ಬಣ್ಣದ ಕಾರಿನಲ್ಲಿ ಬಂದ ಅಪಹರಣಕಾರರು ಕಿಡ್ನಾಪ್ ಮಾಡಿದ್ದರು. ತಕ್ಷಣವೇ ಈ ವಿಚಾರವನ್ನು ಪೋಷಕರು ಪೊಲೀಸರಿಗೆ ತಿಳಿಸಿದ್ದಾರೆ. ಈ ಕುರಿತು ಗುಪ್ತವಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಪಹರಣಕಾರರಿಂದ ಮಗುವನ್ನು ರಕ್ಷಣೆ ಮಾಡಿದ್ದು, ಈ ಸಂಬಂಧ ಇಂದು ನಗರ ಪೊಲೀಸ್ ಆಯುಕ್ತರು ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ:ನಮಗೆ ಇಷ್ಟ ಇರದಿದ್ರೂ ಅಮೆರಿಕಕ್ಕೆ ಓದಲು ಹೋದ.. ಮಗನ ಸಾವಿನ ಸುದ್ದಿ ತಿಳಿದು ಆಘಾತಕೊಳ್ಳಗಾದ ತಂದೆ!
Last Updated : Jun 24, 2022, 12:20 PM IST