ಕರ್ನಾಟಕ

karnataka

ETV Bharat / city

ಬಾಕಿ ಹಣ ನೀಡದಿದ್ದರೆ ಆಯಕ್ತರ ಕಚೇರಿಗೆ ಮುತ್ತಿಗೆ: ಕುರುಬೂರು ಶಾಂತಕುಮಾರ್ ಎಚ್ಚರಿಕೆ - undefined

ಮೈಸೂರಿನ ಪತ್ರಕರ್ತರ ಭವನದಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ, ಕಬ್ಬಿನ ಬಾಕಿ ಹಣ ನೀಡದಿದ್ದರೆ ಮೇ. 25ರಂದು ಸಕ್ಕರೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕುರುಬೂರು ಶಾಂತಕುಮಾರ್ ಪತ್ರಿಕಾಗೋಷ್ಠಿ

By

Published : May 15, 2019, 3:17 PM IST

ಮೈಸೂರು: ರಾಜ್ಯದ ಕಬ್ಬು ಬೆಳೆಗಾರರ 4 ಸಾವಿರ ಕೋಟಿ ರೂ. ಕಬ್ಬಿನ ಬಾಕಿ ಹಣ ನೀಡದಿದ್ದರೆ, ಮೇ. 25ರಂದು ಸಕ್ಕರೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ 67 ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಬೆಳೆಗಾರರು ಕಬ್ಬು ಸರಬರಾಜು ಮಾಡಿದ್ದಾರೆ. ಆದರೆ ಅವರಿಗೆ 4 ಸಾವಿರ ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದಾರೆ. ಮೇ.25 ರೊಳಗೆ ಬಾಕಿ ಹಣ ನೀಡದಿದ್ದರೆ ಬೆಂಗಳೂರಿನ ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದರು.

ಕುರುಬೂರು ಶಾಂತಕುಮಾರ್ ಪತ್ರಿಕಾಗೋಷ್ಠಿ

ಬರಗಾಲದ ಬಗ್ಗೆ ರಾಜ್ಯ ಸರ್ಕಾರ ಕೇವಲ ಬೆಂಗಳೂರಿನಲ್ಲಿ ಕುಳಿತು ಸಭೆ ನಡೆಸಿದರೆ ಸಾಲದು, ಬರ ಪೀಡಿತ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಚುನಾವಣೆ ನೀತಿ ಸಂಹಿತೆ ಮುಂದುವರಿಯುತ್ತಿರುವುದರಿಂದ ಸಾಮಾನ್ಯ ರೈತರಿಗೆ ಹಾಗೂ ಜನರಿಗೆ ಕಷ್ಟವಾಗುತ್ತಿದೆ. ಚುನಾವಣೆ ಮುಗಿದು ತಿಂಗಳಾದರೂ ನೀತಿ ಸಂಹಿತೆ ಜಾರಿಗೊಳಿಸುವ ಬದಲು ನೀತಿ ಸಂಹಿತಿ ಸಡಿಲಗೊಳಿಸಿ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

For All Latest Updates

TAGGED:

ABOUT THE AUTHOR

...view details