ಕರ್ನಾಟಕ

karnataka

ETV Bharat / city

ಮೂರು ದಿನಗಳ ಬಳಿಕ ಪಾಳು ಬಾವಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭ - mysore district Leopard found in a well in h.d.kote taluk

ಭಾನುವಾರ ಮತ್ತೆ ಕಾರ್ಯಾಚರಣೆ ಮುಂದುವರೆಸಿದ ಅರಣ್ಯ ಅಧಿಕಾರಿಗಳು, ಬೋನಿನ ಒಳಗೆ ಒಬ್ಬ ಅಧಿಕಾರಿಯನ್ನು ಕೂರಿಸಿ ಹಗ್ಗದ ಸಹಾಯದಿಂದ ಬೋನನ್ನು 100 ಅಡಿ ಬಾವಿಯೊಳಗೆ ಬಿಟ್ಟು ಪರೀಕ್ಷೆ ನಡೆಸಿದ್ದಾರೆ.‌.

leopard-found-in-a-well-in-hdkote-taluk
ಕಾರ್ಯಾಚರಣೆ ಆರಂಭ

By

Published : Jul 20, 2020, 5:32 PM IST

Updated : Jul 20, 2020, 6:52 PM IST

ಮೈಸೂರು :ಕಳೆದ 3 ದಿನಗಳ ಹಿಂದೆ ಪಾಳು ಬಾವಿಗೆ ಬಿದ್ದಿದ್ದ ಚಿರತೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಸಿಕ್ಕಿದೆ. ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ‌.

ಪಾಳು ಬಾವಿಯಲ್ಲಿ ಚಿರತೆ ಪ್ರತ್ಯಕ್ಷ...ಸೆರೆಗೆ ಕಾರ್ಯಾಚರಣೆ ಆರಂಭ

ಶನಿವಾರ ಹೆಚ್‌ಡಿಕೋಟೆ ತಾಲೂಕಿನ ಕಾರಾಪುರ ಬಳಿಯ ಮನೆಯೊಂದರ ಹಿಂಭಾಗದಲ್ಲಿದ್ದ ಪಾಳು ಬಾವಿಯಲ್ಲಿ ಚಿರತೆ ಬಿದ್ದಿರುವುದಾಗಿ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಶನಿವಾರ ಕಾರ್ಯಾಚರಣೆ ನಡೆಸಿದ ಅರಣ್ಯ ಅಧಿಕಾರಿಗಳಿಗೆ ಚಿರತೆ ಪತ್ತೆಯಾಗಿರಲಿಲ್ಲ. ಭಾನುವಾರ ಮತ್ತೆ ಕಾರ್ಯಾಚರಣೆ ಮುಂದುವರೆಸಿದ ಅರಣ್ಯ ಅಧಿಕಾರಿಗಳು, ಬೋನಿನ ಒಳಗೆ ಒಬ್ಬ ಅಧಿಕಾರಿಯನ್ನು ಕೂರಿಸಿ ಹಗ್ಗದ ಸಹಾಯದಿಂದ ಬೋನನ್ನು 100 ಅಡಿ ಬಾವಿಯೊಳಗೆ ಬಿಟ್ಟು ಪರೀಕ್ಷೆ ನಡೆಸಿದ್ದಾರೆ. ಆಗಲೂ ಕೂಡ ಚಿರತೆ ಪತ್ತೆಯಾಗಿರಲಿಲ್ಲ. ಆದರೂ ಗ್ರಾಮಸ್ಥರು ಚಿರತೆ ಬಾವಿಯೊಳಗಿರುವ ಕೊರಕಲು ಗುಹೆಯೊಳಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದರು.

ಹೀಗಾಗಿ ಅರಣ್ಯ ಇಲಾಖೆಯವರು ಇಂದು ಹೆಚ್ಚುವರಿ ಸಿಬ್ಬಂದಿಯೊಂದಿಗೆ ಸಿಸಿಟಿವಿ ಸಹಾಯದಿಂದ ಚಿರತೆ ಇರುವುದನ್ನು ಪತ್ತೆ ಹಚ್ಚಿದ್ದು, ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ‌.

Last Updated : Jul 20, 2020, 6:52 PM IST

ABOUT THE AUTHOR

...view details