ಕರ್ನಾಟಕ

karnataka

ಸೋಮಶೇಖರ್ ಸೇರಿದಂತೆ ಎಂಟು ಮಂದಿ ಸಚಿವರನ್ನು ತೆಗೆದುಹಾಕುವ ಮಾಹಿತಿ ಇದೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

By

Published : Apr 4, 2022, 2:48 PM IST

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಹಿಂದೆ ವಾರಕ್ಕೊಮ್ಮೆ ಮೈಸೂರಿಗೆ ಬರುತ್ತಿದ್ದರು.‌ ಆದರೆ ಈಗ ಮೈಸೂರಿಗೆ ಬರುತ್ತಿಲ್ಲ, ನಮಗೆ ಇರುವ ಮಾಹಿತಿ ಪ್ರಕಾರ ಸಚಿವ ಎಸ್ ಟಿ ಸೋಮಶೇಖರ್ ಸೇರಿದಂತೆ ಎಂಟು ಮಂದಿ ಸಚಿವರನ್ನು ಸಂಪುಟದಿಂದ ತೆಗೆದುಹಾಕಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.

m-laxman-press-meet-at-mysore
ಸೋಮಶೇಖರ್ ಸೇರಿದಂತೆ ಎಂಟು ಮಂದಿ ಸಚಿವರನ್ನು ತೆಗೆದುಹಾಕುವ ಮಾಹಿತಿ ಇದೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಇತ್ತೀಚೆಗೆ ಮೈಸೂರಿಗೆ ಬರುತ್ತಿಲ್ಲ, ನಮಗಿರುವ ಮಾಹಿತಿ ಪ್ರಕಾರ ಸಚಿವ ಸೋಮಶೇಖರ್ ಸೇರಿದಂತೆ ಎಂಟು ಮಂದಿಯನ್ನು ಸಚಿವ ಸಂಪುಟದಿಂದ ತೆಗೆಯಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಹೇಳಿದ್ದಾರೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಚಿವರ ಬಗ್ಗೆ ಭವಿಷ್ಯ ನುಡಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಹಿಂದೆ ವಾರಕ್ಕೊಮ್ಮೆ ಮೈಸೂರಿಗೆ ಬರುತ್ತಿದ್ದರು.‌ ಆದರೆ ಈಗ ಯಾಕೋ ಜಿಲ್ಲೆಗೆ ಬರುತ್ತಿಲ್ಲ, ನಮಗೆ ತಿಳಿದಿರುವ ಪ್ರಕಾರ ಸಚಿವ ಎಸ್ ಟಿ ಸೋಮಶೇಖರ್ ಸೇರಿದಂತೆ ಎಂಟು ಮಂದಿ ಸಚಿವರನ್ನು ಸಂಪುಟದಿಂದ ತೆಗೆದುಹಾಕುತ್ತಾರೆ ಎಂಬ ಮಾಹಿತಿ ಇದೆ. ಆದ್ದರಿಂದ ಅವರು ಮೈಸೂರು ಜಿಲ್ಲೆಗೆ ಬರುತ್ತಿಲ್ಲ ಎಂದು ಶಂಕೆ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಭಾವನಾತ್ಮಕ ವಿಚಾರವನ್ನು ದೊಡ್ಡದು ಮಾಡಿ: ರಾಜ್ಯಕ್ಕೆ ಕೇಂದ್ರ ಗೃಹ ಅಮಿತ್ ಶಾ ಭೇಟಿ‌ ನೀಡಿ, ಬಿಜೆಪಿ ಕಾರ್ಯಕರ್ತರಿಗೆ ಕೆಲವು ಸಂದೇಶಗಳನ್ನು ನೀಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ರಾಜ್ಯದಲ್ಲಿ ಭಾವನಾತ್ಮಕ ವಿಚಾರ ದೊಡ್ಡದಾಗಿ ಬಿಂಬಿಸಿ ರಕ್ತಪಾತ ಮಾಡಿ, ಲಾಟಿ ಚಾರ್ಜ್, ಗೋಲಿ ಬಾರ್ ನಡೆಯಬೇಕಿದೆ. ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರ ಹಿಡಿಯಬೇಕಾಗಿದೆ ಇದು ದೊಡ್ಡ ಮಟ್ಟದಲ್ಲಿ ನಡೆಯಬೇಕು.‌ ಇದೆಲ್ಲವನ್ನು ಕಾಂಗ್ರೆಸ್ ಪಕ್ಷದ ಮೇಲೆ ಹಾಕಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಹೇಳಿದ್ದಾರೆ. ಅದನ್ನು ಶತಾಯಗತಾಯ ಬಿಜೆಪಿಯವರು ಮಾಡುತ್ತಾರೆ. ಜನ ಬಿಜೆಪಿಯವರ ಪ್ರಚೋದನೆಗೆ ಒಳಗಾಗಬೇಡಿ, ನಿಮ್ಮ ತಲೆ ಮೇಲೆ ನೀವೇ ಚಪ್ಪಡಿಕಲ್ಲು ಹಾಕಿಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದರು.

ಹಲಾಲ್ ಮಾಂಸವನ್ನು ವಿದೇಶಗಳಿಗೆ ರಫ್ತು ಮಾಡುವವರಲ್ಲಿ ಬಿಜೆಪಿ ಉದ್ಯಮಿಗಳೇ ಹೆಚ್ಚಾಗಿ ಇದ್ದಾರೆ. ಸಿ.ಟಿ.‌ ರವಿ ಏಕೆ ಈ ಬಗ್ಗೆ ಮಾತನಾಡುತ್ತಿಲ್ಲ, ಮೊದಲು ವಿದೇಶಗಳಿಗೆ ರಫ್ತಾಗುತ್ತಿರುವ ಹಲಾಲ್ ಮಾಂಸವನ್ನು ಬ್ಯಾನ್ ಮಾಡಿ ಎಂದು ಹೇಳಿದ್ದಾರೆ. ಕಳೆದ ಎರಡು ತಿಂಗಳಿನಿಂದ ಬಿಜೆಪಿಯವರು ಹಿಜಾಬ್, ಮುಸ್ಲಿಂ ವ್ಯಾಪಾರಿಗಳಿಗೆ ಕಡಿವಾಣ, ಟಿಪ್ಪು ಸುಲ್ತಾನ್ ಪ್ರಕರಣ, ಹಲಾಲ್ ಸೇರಿ ಹಲವಾರು ಭಾವನಾತ್ಮಕ ವಿಚಾರಗಳನ್ನು ತೆಗೆದುಕೊಂಡು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದ್ದಾರೆ. ಹಲಾಲ್ ಬಗ್ಗೆ ಮಾತನಾಡುವವರು ಯಾರು ಮಾಂಸ ತಿನ್ನುವವರಲ್ಲ, ಮಾಧ್ಯಮಗಳ ಮುಂದೆ ಮಾತ್ರ ಪ್ರಚಾರ ಮಾಡುತ್ತಾರೆ ಅಷ್ಟೇ ಎಂದರು.

ಹೆಚ್.ಡಿ.ಕುಮಾರಸ್ವಾಮಿಗೆ ಬಿಜೆಪಿ ಸುಪಾರಿ : ಬಿಜೆಪಿಯವರು ಕುಮಾರಸ್ವಾಮಿ ಅವರನ್ನು ಬಳಸಿಕೊಂಡು ಲಾಂಗ್ ಟೈಮ್ ಸುಪಾರಿ ಕೊಟ್ಟಿದ್ದಾರೆ. ಮುಸ್ಲಿಂ ಮತಗಳನ್ನು ವೋಲೈಕೆ ಮಾಡುವ ಕೆಲಸವನ್ನು ಬಿಜೆಪಿಯವರು ಕುಮಾರಸ್ವಾಮಿಗೆ ವಹಿಸಿದ್ದಾರೆ. ಹೆಚ್​ಡಿಕೆ ಯಾವಾಗ ಯಾರ ಪರ ಮಾತನಾಡುತ್ತಾರೆ ಗೊತ್ತಾಗುವುದಿಲ್ಲ. ಈಗ ಬಸವರಾಜ ಬೊಮ್ಮಾಯಿ ಹೇಳಿದ ರೀತಿ ಮಾತನಾಡುತ್ತಿದ್ದಾರೆ. ಯಾವಾಗಲೂ ಬಿಜೆಪಿಯಿಂದ ಸುಪಾರಿ ಪಡೆದ ರೀತಿ ಕುಮಾರಸ್ವಾಮಿ ಮಾತನಾಡುತ್ತಾರೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಟೀಕಿಸಿದರು.

ಓದಿ :ಹೆಚ್​​ಡಿಕೆ ಗಾಳಿಪಟದ ರಾಜಕಾರಣಿ : ಮಾಜಿ ಸಿಎಂ ಕಗ್ಗದ ಸಾಲುಗಳ ಮೂಲಕ ಟ್ವೀಟಿಸಿದ ಬಿಜೆಪಿ

ABOUT THE AUTHOR

...view details