ಮೈಸೂರು: ಉಲ್ಬಣಗೊಳ್ಳುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಪಣ ತೊಟ್ಟಿದ್ದು, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಹಿನ್ನೆಲೆ, ಮೈಸೂರಿನ ಗಾಯತ್ರಿ ಚಿತ್ರಮಂದಿರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಕರ್ಫ್ಯೂ ಆದೇಶದಿಂದ ಮಾಲೀಕರು ಬಹಳಾನೇ ನಷ್ಟ ಅನುಭವಿಸುವಂತಾಗಿದೆ. ಸರ್ಕಾರದ ನಿಯಮಗಳಂತೆ ಶೇ.50ರಷ್ಟು ಆಸನದ ವ್ಯವಸ್ಥೆ ಮಾಡಬೇಕಿತ್ತು. ಆದ್ರೆ ಗಾಯತ್ರಿ ಥಿಯೇಟರ್ನಲ್ಲಿ ಕನ್ನಡ ಸೇರಿದಂತೆ ಯಾವುದೇ ಭಾಷೆಯ ಚಿತ್ರ ಪ್ರದರ್ಶನ ಮಾಡದಿರಲು ಮಾಲೀಕರು ನಿರ್ಧರಿಸಿದ್ದಾರೆ.