ಕರ್ನಾಟಕ

karnataka

By

Published : May 2, 2022, 8:39 PM IST

ETV Bharat / city

ಗೃಹಿಣಿ ಅನುಮಾನಾಸ್ಪದ ಸಾವು: ವರದಕ್ಷಿಣೆ ಕಿರುಕುಳದ ಶಂಕೆ

ಮೈಸೂರಿನ ಹಿಮ್ಮಾವು ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮೃತಳ ಪೋಷಕರು ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ದೂರಿದ್ದಾರೆ.

Death of a housewife suspicious
ಗೃಹಿಣಿ ಅನುಮಾನಾಸ್ಪದವಾಗಿ ಸಾವು: ವರದಕ್ಷಿಣೆ ಕಿರುಕುಳದ ಬಗ್ಗೆ ಶಂಕೆ

ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆಯಾಗಿರುವ ಘಟನೆ ನಂಜನಗೂಡು ತಾಲೂಕಿನ ಹಿಮ್ಮಾವು ಗ್ರಾಮದಲ್ಲಿ ನಡೆದಿದೆ. ಮೈಸೂರಿನ ಹಿಮ್ಮಾವು ಗ್ರಾಮದ ಉಮೇಶ್ ಎಂಬಾತನ ಪತ್ನಿ ಬೇಬಿ (29) ಅನುಮಾನಾಸ್ಪದವಾಗಿ ಮೃತಪಟ್ಟ ಗೃಹಿಣಿ. ಗ್ರಾಮದ ಗುಡ್ಡಪ್ಪ ಮತ್ತು ಜಯಲಕ್ಷ್ಮಿ ಎಂಬುವರ ಪುತ್ರ ಉಮೇಶ್ ಎಂಬಾತನ ಜೊತೆ ಹತ್ತು ವರ್ಷಗಳ ಹಿಂದೆ ತಾಳಪುರ ಗ್ರಾಮದ ಬೇಬಿಯನ್ನು ವಿವಾಹ ಮಾಡಿಕೊಡಲಾಗಿತ್ತು.

ಉಮೇಶ್ ಮತ್ತು ಬೇಬಿ ದಾಂಪತ್ಯಕ್ಕೆ ಸಾಕ್ಷಿ ಎಂಬಂತೆ 6ವರ್ಷದ ಪುತ್ರನಿದ್ದಾನೆ. ಪತಿ-ಪತ್ನಿ ನಡುವೆ ವರದಕ್ಷಿಣೆ ವಿಚಾರವಾಗಿ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ಇಂದು ಮನೆಯ ಕೊಠಡಿಯಲ್ಲಿ ಬೇಬಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈಕೆ ಆತ್ಮಹತ್ಯೆ ಮಾಡಿಕೊಂಡಿಲ್ಲ. ಕೊಲೆ ಮಾಡಿದ್ದಾರೆ ಎಂದು ಬೇಬಿ ಪೋಷಕರು ಶಂಕಿಸಿದ್ದಾರೆ.

ಗೃಹಿಣಿ ಅನುಮಾನಾಸ್ಪದವಾಗಿ ಸಾವು: ವರದಕ್ಷಿಣೆ ಕಿರುಕುಳದ ಬಗ್ಗೆ ಶಂಕೆ

ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಮೃತ ಗೃಹಿಣಿ ಬೇಬಿ ಎಂಬುವರ ಮೈಮೇಲೆ ಹಲ್ಲೆ ಮಾಡಿರುವ ಗುರುತುಗಳು ಕಾಣುತ್ತಿವೆ‌. ವರದಕ್ಷಿಣೆ ಕಿರುಕುಳಕ್ಕೆ ಕೊಲೆ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್​ಐ ಚಂದ್ರು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಶವವನ್ನು ಸಾಗಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಶವವನ್ನು ಒಪ್ಪಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳ ಗಂಡ, ಅತ್ತೆ ಮತ್ತು ಮಾವ ನಾಪತ್ತೆಯಾಗಿದ್ದಾರೆ. ಈ ವಿಚಾರವಾಗಿ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕ್ರೌರ್ಯ! ಮರದ ರೆಂಬೆಗೆ ತಲೆಕೆಳಗಾಗಿ ನೇತುಹಾಕಿ ಯುವಕನಿಗೆ ಥಳಿತ- ವಿಡಿಯೋ

ABOUT THE AUTHOR

...view details