ಕರ್ನಾಟಕ

karnataka

By

Published : Sep 21, 2019, 5:29 PM IST

ETV Bharat / city

ಪೆಟ್ಟು ತಿಂದಿದ್ದೇನೆ, ಉಪ ಚುನಾವಣೆಗೆ ಮೈತ್ರಿ ಇಲ್ಲ: ಹೆಚ್​ಡಿಕೆ ಸ್ಪಷ್ಟೋಕ್ತಿ

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಬೇಕೋ ಅಥವಾ ಬೇಡವೋ ಎನ್ನುವ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಮೈತ್ರಿ ಮಾಡಿಕೊಳ್ಳುವ ಕುರಿತು ಹೆಚ್​ಡಿಕೆ ಸ್ಪಷ್ಟನೆ

ಮೈಸೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಬೇಕೋ ಅಥವಾ ಬೇಡವೋ ಎನ್ನುವ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಮೈತ್ರಿ ಮಾಡಿಕೊಳ್ಳುವ ಕುರಿತು ಹೆಚ್​ಡಿಕೆ ಸ್ಪಷ್ಟನೆ

ಇಂದು ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದ ಶಾಸಕ ಹೆಚ್‌ ಡಿ ಕುಮಾರಸ್ವಾಮಿ, ಜೆಡಿಎಸ್ ಜೊತೆ ಯಾವುದೇ ಮೈತ್ರಿ ಬೇಡ ಎಂದು ಈಗಾಗಲೇ ಕರ್ನಾಟಕ ರಾಜ್ಯದ ಕಾಂಗ್ರೆಸ್ ನಾಯಕರು ಹೈಕಮಾಂಡ್​ಗೆ ಹೇಳಿದ್ದಾರೆ. ಅವರದ್ದು ಶಕ್ತಿಯುತ ಪಕ್ಷವಾಗಿದ್ದು, ನಾನು ಕೂಡಾ ಕಾಂಗ್ರೆಸ್ ಜೊತೆ ವೈಯಕ್ತಿಕವಾಗಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. 14 ತಿಂಗಳು ಹೊಂದಾಣಿಕೆ ಮಾಡಿಕೊಂಡು ಯಾವ ರೀತಿ ಪೆಟ್ಟು ತಿಂದಿದ್ದೇನೆ ಎಂಬುದು ನನಗೆ ಗೊತ್ತು. ಕಾಂಗ್ರೆಸ್ ನಾಯಕರು ಇತ್ತೀಚೆಗೆ ಯಾವ ರೀತಿ ಮಾತನಾಡುತ್ತಿದ್ದಾರೆ ಎಂಬುದರ ಬಗ್ಗೆಯೂ ಅರಿವಿದೆ. ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳದೆ, ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. ಹಾಗೂ ಉಪ ಚುನಾವಣೆ ನಂತರ ಮತ್ತೆ ಕಾಂಗ್ರೆಸ್ ಜೊತೆ ಸೇರಿ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ಇಲ್ಲ ಎಂದರು.

ABOUT THE AUTHOR

...view details