ಕರ್ನಾಟಕ

karnataka

ETV Bharat / city

ಮೈಸೂರು ಜಂಬೂ ಸವಾರಿಗೆ ಭರದ ಸಿದ್ಧತೆ: ಸಚಿವ ಎಸ್​ ಟಿ ಸೋಮಶೇಖರ್

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ವಿಜಯ ದಶಮಿಯಂದು ನಾಳೆ (ಅ.5) ನಡೆಯಲಿದೆ. ಈ ಬಾರಿ ಲಕ್ಷಾಂತರ ಜನರು ಸೇರುವ ನಿರೀಕ್ಷೆ ಹಿನ್ನೆಲೆ ಮೈಸೂರು ನಗರದಾದ್ಯಂತ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

By

Published : Oct 4, 2022, 11:27 AM IST

Minister ST Somashekar
ಸಚಿವ ಎಸ್.ಟಿ ಸೋಮಶೇಖರ್

ಮೈಸೂರು: ಅದ್ಧೂರಿ ಜಂಬೂ ಸವಾರಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 9 ದಿನಗಳ ಕಾಲ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಲಕ್ಷಾಂತರ ಜನರನ್ನು ತಲುಪಿವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ 'ಈಟಿವಿ ಭಾರತ'ಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ವಿವರಿಸಿದರು.

ಸೆ. 26 ರಂದು ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿಗಳಿಂದ ಉದ್ಘಾಟನೆಯಾದ ನಾಡಹಬ್ಬ ದಸರಾ ನಾಳೆ ಜಂಬೂ ಸವಾರಿಯೊಂದಿಗೆ ಸಂಪನ್ನವಾಗಲಿದೆ. ನಾಳಿನ ಅದ್ಧೂರಿ ಜಂಬೂ ಸವಾರಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿಯ ಜಂಬೂ ಸವಾರಿಯಲ್ಲಿ 47 ಸ್ತಬ್ಧ ಚಿತ್ರಗಳು ಹಾಗೂ ಕಲಾ ತಂಡಗಳು ಭಾಗವಹಿಸಲಿವೆ. ಪೊಲೀಸ್ ಕಮಿಷನರ್ ಭದ್ರತೆ ಹಾಗೂ ಮೆರವಣಿಗೆ ಉಸ್ತುವಾರಿ ವಹಿಸಲಿದ್ದಾರೆ. ಕಾರ್ಪೊರೇಷನ್ ಕಮಿಷನರ್ ದಸರಾ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಹಾಗೂ ಸ್ವಚ್ಛತೆ ನೋಡಿಕೊಳ್ಳಲಿದ್ದಾರೆ.

'ಈಟಿವಿ ಭಾರತ'ದೊಂದಿಗೆ ಸಚಿವ ಎಸ್.ಟಿ ಸೋಮಶೇಖರ್ ಸಂದರ್ಶನ

9 ದಿನಗಳ ಕಾಲ ನಡೆದ ವಿವಿಧ ಕಾರ್ಯಕ್ರಮಗಳನ್ನು ಲಕ್ಷಾಂತರ ಜನ ನೋಡಿದ್ದಾರೆ. ಇಂದು ಮುಖ್ಯಮಂತ್ರಿಗಳು ಮೈಸೂರಿಗೆ ಅಗಮಿಸಲಿದ್ದು, ನಾಳಿನ ಜಂಬೂ ಸವಾರಿಯಲ್ಲಿ ಭಾಗವಹಿಸಲಿದ್ದಾರೆ. ಮಹಾರಾಣಿ ಪ್ರಮೋದಾದೇವಿ ಒಡೆಯರ್ ದಸರಾಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದು, ಯಾವುದೇ ಗೊಂದಲವಿಲ್ಲ ಎಂದು ಸಚಿವರು ತಿಳಿಸಿದರು.

ಪಾಸ್ ವ್ಯವಸ್ಥೆ ಸರಿಯಾಗಿದೆ. ಕೆಲವರು ಬೇಕಂತಲೇ ಕಿರಿಕಿರಿ ಮಾಡುತ್ತಿದ್ದಾರೆ. ಲಕ್ಷಾಂತರ ಜನ ದಸರಾ ನೋಡಲು ಆಗಮಿಸುತ್ತಾರೆ. ಎಲ್ಲರಿಗೂ ಪಾಸ್ ಕೊಡಲು ಸಾಧ್ಯವೇ? ಎಂದು ಪ್ರಶ್ನಿಸಿದ ಸಚಿವರು ಯಾವುದೇ ಸಮಸ್ಯೆ ಇಲ್ಲ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಅರಮನೆಯಲ್ಲಿ ನಾಳೆ ನಡೆಯಲಿರುವ ಆಯುಧಪೂಜೆಯ ಧಾರ್ಮಿಕ ಕೈಂಕರ್ಯಗಳ ವಿವರ

ABOUT THE AUTHOR

...view details