ಕರ್ನಾಟಕ

karnataka

ETV Bharat / city

ಸಾಂಸ್ಕೃತಿಕ ನಗರಿಗೆ ರಾಷ್ಟ್ರಪತಿ ಆಗಮನ, ರಾಜ್ಯಪಾಲರಿಂದ ಸ್ವಾಗತ - Ramnath kovind in Mysore

ತಮ್ಮ ಪತ್ನಿಯೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. 2 ದಿನಗಳ ಭೇಟಿಗಾಗಿ ಬಂದಿರುವ ಅವರನ್ನು ಮಂಡಕನಹಳ್ಳಿ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ವಜುಭಾಯಿ ರೂಢಭಾಯಿ ವಾಲಾ ಸ್ವಾಗತಿಸಿದರು.

ಸಾಂಸ್ಕೃತಿಕ ನಗರಿಗೆ ರಾಷ್ಟ್ರಪತಿಗಳ ಆಗಮನ

By

Published : Oct 10, 2019, 7:23 PM IST

ಮೈಸೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ 2 ದಿನಗಳ ಭೇಟಿಗಾಗಿ ಮೊದಲ ಬಾರಿಗೆ ಸಾಂಸ್ಕೃತಿಕ ನಗರಿಗೆ ಆಗಮಿಸಿದ್ದಾರೆ.

ತಮ್ಮ ಪತ್ನಿಯೊಂದಿಗೆ ಆಗಮಿಸಿದ ಕೋವಿಂದ್, ಇಂದು ಮಂಡಕನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ವಜುಭಾಯಿ ರೂಢಭಾಯಿ ವಾಲಾ, ಉಸ್ತುವಾರಿ ಸಚಿವ ವಿ. ಸೋಮಣ್ಣ, ಮೈಸೂರು ಮೇಯರ್ ಪುಷ್ಪಲತಾ ಜಗನ್ನಾಥ್ ಸೇರಿದಂತೆ ಅಧಿಕಾರಿಗಳು ಸ್ವಾಗತಿಸಿದರು.‌

ಸಾಂಸ್ಕೃತಿಕ ನಗರಿಗೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್
ಸಾಂಸ್ಕೃತಿಕ ನಗರಿಗೆ ರಾಷ್ಟ್ರಪತಿಗಳ ಆಗಮನ

ಇಂದು ಸಂಜೆ ಅರಮನೆಯಲ್ಲಿ ನಡೆಯುವ ಜಯಚಾಮರಾಜೇಂದ್ರ ಒಡೆಯರ್ ಶತಮಾನೋತ್ಸವದ ನಿಮಿತ್ತ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸುವ ರಾಷ್ಟ್ರಪತಿಗಳು, ಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಸುತ್ತೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ದೆಹಲಿಗೆ ವಾಪಸ್ ಆಗಲಿದ್ದಾರೆ.

ABOUT THE AUTHOR

...view details