ಮೈಸೂರು:ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಿಂದ ಮೇಯರ್ ಸ್ಥಾನ ಕೈ ತಪ್ಪಿದ್ದಕ್ಕೆ ಮನನೊಂದ ನಗರ ಪಾಲಿಕೆ ಬಿಜೆಪಿ ಸದಸ್ಯೆ ಸುನಂದ ಪಾಲನೇತ್ರ ರಾಜೀನಾಮೆಗೆ ಮುಂದಾಗಿದ್ದಾರೆ.
ಕುವೆಂಪುನಗರದ ವಾರ್ಡ್ ನಂ.59ರ ಪಾಲಿಕೆ ಸದಸ್ಯೆಯಾಗಿರುವ ನಾನು, ಪಕ್ಷದಿಂದ ಸ್ಫರ್ಧಿಸಿ ಪರಾಭವ ಹೊಂದಿದ್ದೇನೆ. ಇದರಿಂದ ಬೇಸರವಾಗಿದ್ದು, ಪಾಲಿಕೆ ಸದಸ್ಯೆಯಾಗಿ ಮುಂದುವರೆಯಲು ಮಾನಸಿಕ ಹಿಂಸೆ ಆಗುತ್ತಿದೆ. ಹಾಗಾಗಿ ರಾಜೀನಾಮೆ ನೀಡುವ ಉದ್ದೇಶ ಹೊಂದಿದ್ದೇನೆ. ಈ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.