ಕರ್ನಾಟಕ

karnataka

ಕೈ ತಪ್ಪಿದ ಮೈಸೂರು ಮೇಯರ್ ಸ್ಥಾನ: ರಾಜೀನಾಮೆಗೆ ಮುಂದಾದ ಬಿಜೆಪಿ‌ ಸದಸ್ಯೆ!

By

Published : Feb 25, 2021, 9:54 AM IST

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಿಂದ ಮೈಸೂರು ಮೇಯರ್ ಸ್ಥಾನ ಕೈ ತಪ್ಪಿದ್ದಕ್ಕೆ ಬಿಜೆಪಿ ಸದಸ್ಯೆ ಸುನಂದ ಪಾಲನೇತ್ರ ರಾಜೀನಾಮೆಗೆ ಮುಂದಾಗಿದ್ದಾರೆ. ಈ ಕುರಿತು ಸೂಕ್ತ ಮಾರ್ಗದರ್ಶನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

BJP member Sunanda Palanetra
ಬಿಜೆಪಿ ಸದಸ್ಯೆ ಸುನಂದ ಪಾಲನೇತ್ರ

ಮೈಸೂರು:ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಿಂದ ಮೇಯರ್ ಸ್ಥಾನ ಕೈ ತಪ್ಪಿದ್ದಕ್ಕೆ ಮನನೊಂದ ನಗರ ಪಾಲಿಕೆ ಬಿಜೆಪಿ ಸದಸ್ಯೆ ಸುನಂದ ಪಾಲನೇತ್ರ ರಾಜೀನಾಮೆಗೆ ಮುಂದಾಗಿದ್ದಾರೆ.

ಕುವೆಂಪುನಗರದ ವಾರ್ಡ್ ನಂ.59ರ ಪಾಲಿಕೆ ಸದಸ್ಯೆಯಾಗಿರುವ ನಾನು, ಪಕ್ಷದಿಂದ ಸ್ಫರ್ಧಿಸಿ ಪರಾಭವ ಹೊಂದಿದ್ದೇನೆ. ಇದರಿಂದ ಬೇಸರವಾಗಿದ್ದು, ಪಾಲಿಕೆ ಸದಸ್ಯೆಯಾಗಿ ಮುಂದುವರೆಯಲು ಮಾನಸಿಕ ಹಿಂಸೆ ಆಗುತ್ತಿದೆ. ಹಾಗಾಗಿ ರಾಜೀನಾಮೆ ನೀಡುವ ಉದ್ದೇಶ ಹೊಂದಿದ್ದೇನೆ. ಈ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಓದಿ:ಹಿರೇನಾಗವಲ್ಲಿ ಜಿಲೆಟಿನ್​ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ತಮಿಳುನಾಡಿನಲ್ಲಿ ಸೆರೆ

ಬುಧವಾರ ನಡೆದ ಮೇಯರ್-ಉಪಮೇಯರ್ ಚುನಾವಣೆಯಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿಯಿಂದ ಸುನಂದ ಪಾಲನೇತ್ರ ಅವರಿಗೆ ಮೇಯರ್ ಸ್ಥಾನ ಕೈ ತಪ್ಪಿತ್ತು.

ABOUT THE AUTHOR

...view details