ಕರ್ನಾಟಕ

karnataka

ETV Bharat / city

ತಂತ್ರಜ್ಞಾನ ಬಳಕೆಯಿಂದ GST ದೂರುಗಳ ತನಿಖೆ: ನಿರ್ಮಲಾ‌ ಸೀತಾರಾಮನ್ - investigate GST complaints

ತಂತ್ರಜ್ಞಾನದ ಮೂಲಕ ಸರಕು ಮತ್ತು ಸೇವಾ ತೆರಿಗೆ (ಜಿಎಸ್​​ಟಿ) ಸಂಬಂಧಿಸಿದ ದೂರುಗಳನ್ನು ತನಿಖೆ ನಡೆಸಲಿದ್ದೇವೆ. ಇದರಿಂದ ಸಿಬ್ಬಂದಿ ಹಾಗೂ ತೆರಿಗೆದಾರರು ಒತ್ತಡ ರಹಿತವಾಗಿ ಕೆಲಸ ನಿರ್ವಹಿಸಲು ಅನುಕೂಲವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

The use of technology to investigate GST complaints

By

Published : Aug 22, 2019, 7:27 PM IST

ಮೈಸೂರು:ಸರಕು ಮತ್ತು ಸೇವಾ ತೆರಿಗೆ (ಜಿಎಸ್​​ಟಿ)ಸಂಬಂಧಿಸಿದ ದೂರುಗಳನ್ನು ಇನ್ನು ಮುಂದೆ ತಂತ್ರಜ್ಞಾನ ಬಳಸಿಕೊಂಡು ತನಿಖೆ ನಡೆಸಲಾಗುವುದು. ಯಾವುದೇ ಮುಖಾಮುಖಿ ವಿಚಾರಣೆ ಅಗತ್ಯ ಇರುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ವಿಜಯದಶಮಿ ದಿನವೇ ಚಾಲನೆ ದೊರೆಯಲಿದೆ. ಆದಾಯ ತೆರಿಗೆ ಇಲಾಖೆಯನ್ನು ಮತ್ತಷ್ಟು ಬಲಗೊಳಿಸುವ ಮತ್ತು ಕೆಲ ವಸ್ತುಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ. ಇದಕ್ಕೆ ಸಾಕಷ್ಟು ಮನವಿಗಳು ಬರುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.

ಜಿಎಸ್​ಟಿ ಹಾಗೂ ಇತರೆ ತೆರಿಗೆ ವಿಚಾರವಾಗಿ ಗುಜರಾತ್, ವಾರಣಾಸಿ ನಂತರ 3ನೇ ಸಭೆಯನ್ನು ಮೈಸೂರಿನಲ್ಲಿ ನಡೆಸಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇನೆ. ಇದರಿಂದ ಸಿಬ್ಬಂದಿ ಹಾಗೂ ತೆರಿಗೆದಾರರು ಒತ್ತಡ ರಹಿತವಾಗಿ ಕೆಲಸ ನಿರ್ವಹಿಸಲು ಅನುಕೂಲವಾಗಲಿದೆ. ಅಲ್ಲದೆ, ತೆರಿಗೆ ಸಂಗ್ರಹದ ವಾರ್ಷಿಕ ಗುರಿಗೂ ತೊಂದರೆ ಇಲ್ಲ ಎಂದು ವಿವರಿಸಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್

ಹಣದುಬ್ಬರ ಭಾರತ ಮಾತ್ರವಲ್ಲ‌. ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕುಸಿಯುತ್ತಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ತಜ್ಞರೊಂದಿಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುತ್ತೇನೆ.ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆಭೇಟಿ‌ ನೀಡಿದ್ದರ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿದ್ದೇನೆ. ಆದ್ರೆ, ಇದೇ ಅಂತಿಮವಲ್ಲ. ಕೇಂದ್ರದಿಂದ ಮತ್ತೊಂದು ತಂಡ ಭೇಟಿ ನೀಡಿ ಪರಿಶೀಲಿಸಲಿದೆ. ನಂತರ ಪರಿಹಾರ ಘೋಷಿಸಲಾಗುವುದು ಎಂದರು.

ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಬಂಧನದ ಕುರಿತು ಪ್ರತಿಕ್ರಿಯಿಸಿದ ಅವರು, ಚಿದಂಬರಂ ಅವರನ್ನು ರಾಜಕೀಯ ದ್ವೇಷದಿಂದ ಬಂಧಿಸಿಲ್ಲ. ಈ ಕುರಿತು ಕಾಂಗ್ರೆಸ್ ಮಾಡುತ್ತಿರುವ ಆರೋಪಗಳು ನಿರಾಧಾರ. ಸುಖಾಸುಮ್ಮನೆ ಆರೋಪಿಸುವುದು ಪಕ್ಷಕ್ಕೆ ಶೋಭೆ ತರುವುದಿಲ್ಲ ಎಂದರು.

ಸಿಬಿಐ ಎಲ್ಲಾ ಮಾಹಿತಿ ಕಲೆ ಹಾಕುವವರೆಗೂ ಸುಮ್ಮನಿರಬೇಕು. ಸಿಬಿಐ ಮತ್ತು ಇಡಿ ಸಂಸ್ಥೆಗಳನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾವ ರೀತಿ ಬಳಕೆ ಮಾಡಿಕೊಂಡಿತ್ತು ಎಂದು ನೆನಪು ಮಾಡಿಕೊಳ್ಳಲಿ ಎಂದು ಟಾಂಗ್​ ಕೊಟ್ಟರು.

ABOUT THE AUTHOR

...view details