ಮೈಸೂರು: ಡಿ.ಕೆ.ಶಿವಕುಮಾರ್ ಅವರಿಗೆ ಇಂತಹ ಪ್ರಕರಣಗಳು ಹೊಸದೇನಲ್ಲ. ಕಾಂಗ್ರೆಸ್ ಅಂದ್ರೆ ಅದು ಹಗರಣಗಳ ಸರ್ಕಾರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕುಟುಕಿದರು.
ಕಾಂಗ್ರೆಸ್ ವಕ್ತಾರ ವಿ.ಎಸ್.ಉಗ್ರಪ್ಪ, ಸಲೀಂ ನಡುವೆ ಸಂಭಾಷಣೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರ ಅಧಿಕಾರದಲ್ಲಿ ಸಾಕಷ್ಟು ಹಗರಣಗಳು ನಡೆದಿವೆ. ಹಲವಾರು ಹಗರಣಗಳ ಕಾಂಗ್ರೆಸ್ ಸರ್ಕಾರವಾಗಿತ್ತು. ಅದರಲ್ಲಿ ಡಿಕೆಶಿ ನಡೆಸಿದ ಹಗರಣವನ್ನ ಅವರ ಪಕ್ಷದ ಮುಖಂಡರೇ ಬಯಲು ಮಾಡಿದ್ದಾರೆ ಎಂದು ಹೇಳಿದರು.
ದೇಶದಲ್ಲಿ ರಸಗೊಬ್ಬರದ ಕೊರತೆ ಇಲ್ಲ. ಈ ವರ್ಷ ದೇಶದಲ್ಲಿ ಉತ್ತಮ ಮಳೆ ಆಗಿ ಕೃಷಿ ಆದಾಯ ಹೆಚ್ಚಾಗಿದೆ. ನಮಗೆ ಪೊಟ್ಯಾಷ್ ಹೊರ ದೇಶದಿಂದ ಬರುತ್ತೆ. ಕೊರೊನಾ ಕಾರಣಕ್ಕೆ ವಿದೇಶದಿಂದ ಬರುವ ರಸಗೊಬ್ಬರದಲ್ಲಿ ಕೊಂಚ ಕೊರತೆ ಇದೆ. ಮೋದಿ ಸರ್ಕಾರ ಇನ್ನೆರಡು ವರ್ಷದಲ್ಲಿ ರಸಗೊಬ್ಬರದಲ್ಲೂ ಸ್ವಾವಲಂಬನೆ ಸಾಧಿಸುವ ಕಾರ್ಯಕ್ರಮ ರೂಪಿಸಿದೆ ಎಂದರು.