ಕರ್ನಾಟಕ

karnataka

ಪದವೀಧರ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡಿ : ವಾಟಾಳ್ ನಾಗರಾಜ್

By

Published : Jan 30, 2022, 7:46 PM IST

ರಾಜ್ಯದಲ್ಲಿ ಖಾಸಗಿ ಕಂಪನಿಗಳು ಕನ್ನಡಿಗರನ್ನು ಕಡೆಗಣಿಸಿ ಬೇರೆ ಬೇರೆ ರಾಜ್ಯದ ಯುವಕರನ್ನು ಕೆಲಸಕ್ಕೆ ತೆಗೆದುಕೊಳ್ಳುತ್ತಿರುವುದರಿಂದ, ಕನ್ನಡದ ಯುವಕರಿಗೆ ಅನ್ಯಾಯವಾಗುತ್ತಿದೆ. ಪದವೀಧರರಾಗಿದ್ದರೂ ನಮ್ಮ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ..

Vatal nagaraj urges to Give the unemployment allowance to the unemployed
ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್

ಮೈಸೂರು: ಪದವೀಧರ ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ 10,000 ರೂ. ನಿರುದ್ಯೋಗ ಭತ್ಯೆ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದರು.

ನಿರುದ್ಯೋಗಿಗಳಿಗೆ ಭತ್ಯೆ ನೀಡುವಂತೆ ಆಗ್ರಸಿರುವ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್..

ಮೈಸೂರಿನ ಹಾರ್ಡಿಂಗ್ ವೃತ್ತದ ಬಳಿ ಪ್ರತಿಭಟನೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಖಾಸಗಿ ಕಂಪನಿಗಳು ಕನ್ನಡಿಗರನ್ನು ಕಡೆಗಣಿಸಿ ಬೇರೆ ಬೇರೆ ರಾಜ್ಯದ ಯುವಕರನ್ನು ಕೆಲಸಕ್ಕೆ ತೆಗೆದುಕೊಳ್ಳುತ್ತಿರುವುದರಿಂದ, ಕನ್ನಡದ ಯುವಕರಿಗೆ ಅನ್ಯಾಯವಾಗುತ್ತಿದೆ. ಪದವೀಧರರಾಗಿದ್ದರೂ ನಮ್ಮ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಸರ್ಕಾರ ಕೂಡ ವಿದ್ಯಾವಂತರನ್ನು ಕಡೆಗಣಿಸಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ:ಕಲಬುರಗಿಯಲ್ಲಿ ಸಂತಾನ ಹರಣ ಚಿಕಿತ್ಸೆ ಬಳಿಕವೂ ಮಗು ಜನನ.. 3 ಸಾಕು ಎಂದಿದ್ದವಳ ಮಡಿಲಿಗೆ ಮತ್ತೊಂದು ಶಿಶು!

ಅತಿಥಿ ಉಪನ್ಯಾಸಕರನ್ನು ಸರ್ಕಾರ ಬೀದಿ ಪಾಲು ಮಾಡಿದೆ. ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ಸೇವೆಯನ್ನು ಖಾಯಂಗೊಳಿಸಬೇಕು. ಶಿಕ್ಷಕರ ನೇಮಕಾತಿ ವೈಜ್ಞಾನಿಕವಾಗಿ ಆಗಬೇಕು ಎಂದು ಒತ್ತಾಯಿಸಿದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details