ಕರ್ನಾಟಕ

karnataka

ಶಿವಮೊಗ್ಗದಲ್ಲಿ ಪರಸ್ಪರ ಹೊಡೆದಾಡಿಕೊಂಡು ಪ್ರಾಣಬಿಟ್ಟ ಇಬ್ಬರು ಯುವಕರು

By

Published : Feb 20, 2022, 9:49 AM IST

ಶಿವಮೊಗ್ಗದಲ್ಲಿ ಇಬ್ಬರು ಯುವಕರು ಪರಸ್ಪರ ಹೊಡೆದಾಡಿಕೊಂಡು ಸಾವನ್ನಪ್ಪಿದ್ದಾರೆ. ಕೌಟುಂಬಿಕ ಕಲಹದಿಂದ ಮಾರಾಮಾರಿ ನಡೆದಿದೆ.

ಯುವಕರ ಸಾವು
ಯುವಕರ ಸಾವು

ಶಿವಮೊಗ್ಗ:ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪರಸ್ಪರ‌ ಹೊಡೆದಾಡಿಕೊಂಡು ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಹೊರವಲಯದ ಸೂಳೆಬೈಲು ಶಾಂತಿನಗರ 7ನೇ ಕ್ರಾಸ್​​ನಲ್ಲಿ ಈ ಘಟನೆ ನಡೆದಿದೆ.

ಸಲೀಮ್ ಅಹಮದ್(22) ಹಾಗೂ ಅಬ್ದುಲ್ ದಸ್ತಗಿರಿ(23) ಮೃತಪಟ್ಟವರೆಂದು ಗುರುತಿಸಲಾಗಿದೆ. ಕೌಟುಂಬಿಕ ವೈಷಮ್ಯಕ್ಕೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ಇಬ್ಬರ ನಡುವೆ ಗಲಾಟೆ ಆರಂಭವಾಗಿತ್ತು. ಬಳಿಕ ಇಬ್ಬರೂ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದರು. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಇಬ್ಬರೂ ಮೃತಪಟ್ಟಿದ್ದಾರೆ.

ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

ಇದನ್ನೂ ಓದಿ: ವಡಾಪಾವ್ ತಿಂದು ಹಣ ನೀಡದೇ ಹೋದ ಕೇಂದ್ರ ಸಚಿವ: ಬಿಲ್‌ ಪಾವತಿಸಿದ ಬಿಜೆಪಿ ಕಾರ್ಯಕರ್ತ

ABOUT THE AUTHOR

...view details