ಕರ್ನಾಟಕ

karnataka

By

Published : Sep 28, 2021, 6:52 AM IST

ETV Bharat / city

ಪಕ್ಷ ಸಂಘಟನೆಗೆ ಮಾಜಿ ಸಿಎಂ ಬಿಎಸ್​ವೈ ಕರೆ

ಮುಂಬರುವ ಎಲ್ಲ ಚುನಾವಣೆಗೆ ಪಕ್ಷವನ್ನು ಗ್ರಾಮ ಮಟ್ಟದಿಂದಲೇ ಸಂಘಟಿಸಬೇಕಾಗಿದೆ ಎಂದು ಗ್ರಾಮ ಪಂಚಾಯತ್​​​ ಸದಸ್ಯರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಕರೆ ನೀಡಿದ್ದಾರೆ.

bs yadiyurappa talk on organization of party
ಪಕ್ಷ ಸಂಘಟನೆಗೆ ಮಾಜಿ ಸಿಎಂ ಬಿಎಸ್​ವೈ ಕರೆ

ಶಿವಮೊಗ್ಗ: ಮುಂಬರುವ ಎಲ್ಲ ಚುನಾವಣೆಗೆ ಪಕ್ಷವನ್ನು ಗ್ರಾಮ ಮಟ್ಟದಿಂದಲೇ ಸಂಘಟಿಸಬೇಕಾಗಿದೆ. ಹಾಗಾಗಿ ಎಲ್ಲ ಗ್ರಾಮ ಪಂಚಾಯತ್​ ಚುನಾಯಿತ ಸದಸ್ಯರುಗಳು ಪಕ್ಷ ಸಂಘಟನೆಗಾಗಿ ಕೆಲಸ ಮಾಡುವ ಮೂಲಕ ಗ್ರಾಮದ ಅಭಿವೃದ್ಧಿ ಮಾಡಬೇಕಿದೆ ಎಂದು ಗ್ರಾಮ ಪಂಚಾಯತ್​​​ ಸದಸ್ಯರಿಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಕರೆ ನೀಡಿದ್ದಾರೆ.

ಗ್ರಾಮ ಪಂಚಾಯತ್​​ ಚುನಾಯಿತ ಪ್ರತಿನಿಧಿಗಳ ಸಮಾವೇಶ

ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ನಿನ್ನೆ ಶಿಕಾರಿಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್​​ ಚುನಾಯಿತ ಪ್ರತಿನಿಧಿಗಳ ಸಮಾವೇಶ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮುಂಬರುವ ಚುನಾವಣೆ ಸೇರಿದಂತೆ ಪಕ್ಷದ ಸಂಘಟನೆಯ ಕುರಿತು ಚರ್ಚೆ ನಡೆಸಿದರು.

ಇದನ್ನೂ ಓದಿ:ಅರಮನೆ ಒಳ ಆವರಣದಲ್ಲಿ ಧಾರ್ಮಿಕ ಪೂಜೆ: ಪ್ರವಾಸಿಗರ ಪ್ರವೇಶ ನಿರ್ಬಂಧ

ಕಾರ್ಯಕ್ರಮದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಶಿವಮೊಗ್ಗ ಮಲೆನಾಡು ಪ್ರಾಧಿಕಾರದ ಅಧ್ಯಕ್ಷರಾದ ಗುರುಮೂರ್ತಿ, ಶಿಕಾರಿಪುರ ರೈತ ಮೋರ್ಚಾ ಅಧ್ಯಕ್ಷ ಪ್ರೇಮ್​ ಕುಮಾರ್ ಗೌಡ, ತಾಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ತಾಲೂಕು ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗಪ್ಪ ನಿಂಬೆಗುದ್ದಿ ಹಾಗೂ ಪಕ್ಷದ ಸ್ಥಳೀಯ ಮುಖಂಡರು, ಕ್ಷೇತ್ರದ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

ABOUT THE AUTHOR

...view details