ಕರ್ನಾಟಕ

karnataka

ಗ್ರಾಹಕರನ್ನು ವಂಚಿಸುತ್ತಿದ್ದವರಿಗೆ ಬಿಸಿ ಮುಟ್ಟಿಸಿದ ಕಾನೂನು ಮಾಪನಶಾಸ್ತ್ರ ಇಲಾಖೆ

By

Published : Jan 19, 2021, 10:48 PM IST

ಶಿವಮೊಗ್ಗದಲ್ಲಿ ಗ್ರಾಹಕರನ್ನು ವಂಚಿಸುತ್ತಿದ್ದ ವ್ಯಾಪಾರಿ ಸಂಸ್ಥೆಗಳನ್ನು ಗುರುತಿಸಿ 913 ಮೊಕದ್ದಮೆ ದಾಖಲಿಸಲಾಗಿದೆ. ವ್ಯಾಪಾರ, ವ್ಯವಹಾರ ನಡೆಸುವವರು ಬಳಸುವ ತೂಕ ಮತ್ತು ಅಳತೆ ಪರಿಕರಗಳ ಸತ್ಯಾಪನೆ ನಡೆಸಿ 1,05,26,436ರೂ. ಶುಲ್ಕ ವಸೂಲಿ ಮಾಡಲಾಗಿದೆ.

department-of-legal-metrology-takes-action-against-fraudulent-customers
ಕಾನೂನು ಮಾಪನಶಾಸ್ತ್ರ ಇಲಾಖೆ

ಶಿವಮೊಗ್ಗ: ದೋಷಪೂರಿತ ತೂಕ ಮತ್ತು ಅಳತೆ ಪರಿಕರಗಳನ್ನು ಬಳಸುವುದು, ತೂಕ ಮತ್ತು ಅಳತೆಯಲ್ಲಿ ವಂಚಿಸುವುದು, ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಗ್ರಾಹಕರನ್ನು ವಂಚಿಸುತ್ತಿದ್ದ ವ್ಯಾಪಾರಿ ಸಂಸ್ಥೆಗಳನ್ನು ಗುರುತಿಸಿ 913 ಮೊಕದ್ದಮೆ ದಾಖಲಿಸಲಾಗಿದೆ ಎಂದು ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಎಸ್. ಮಂಜುನಾಥ್ ಅವರು ತಿಳಿಸಿದ್ದಾರೆ.

2020ರ ಏಪ್ರಿಲ್‍ನಿಂದ 2021 ಜನವರಿವರೆಗಿನ ಅವಧಿಯಲ್ಲಿ ಜಿಲ್ಲೆಯಲ್ಲಿ 1,868 ವ್ಯಾಪಾರಸ್ಥರ ಹಾಗೂ ಕೈಗಾರಿಕಾ ಕೇಂದ್ರಗಳಿಗೆ ಹಠಾತ್ ಭೇಟಿ ನೀಡಿ ಪರಿಶೀಲಿಸಲಾಗಿದೆ. ಇದಲ್ಲದೆ ವ್ಯಾಪಾರ, ವ್ಯವಹಾರ ನಡೆಸುವವರು ಬಳಸುವ ತೂಕ ಮತ್ತು ಅಳತೆ ಪರಿಕರಗಳ ಸತ್ಯಾಪನೆ ನಡೆಸಿ 1,05,26,436 ರೂಪಾಯಿ ಶುಲ್ಕ ವಸೂಲಿ ಮಾಡಲಾಗಿದೆ. ವಂಚನೆ ಆರೋಪದಲ್ಲಿ ದಾಖಲಾದ ಮೊಕದ್ದಮೆಗಳ ಪೈಕಿ 911 ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಿ, ತಪ್ಪಿತಸ್ಥರಿಂದ 15,97,200ರೂ. ದಂಡ ವಸೂಲಿ ಮಾಡಲಾಗಿದೆ.

ಓದಿ-ಮದುವೆಯಾದ 5 ತಿಂಗಳಿಗೇ ಮಗು ಜನನ.. ಆದರೆ, ಆ ಹಸುಳೆಯನ್ನ ಮಾರಿ ಬಿಡೋದೆ ಮಾರಿ!

ನ್ಯಾಯಬೆಲೆ ಅಂಗಡಿ, ಚಿಲ್ಲರೆ ಸೀಮೆಎಣ್ಣೆ ಮಾರಾಟಗಾರರು, ಸಗಟು ವ್ಯಾಪಾರಸ್ಥರು, ಗೊಬ್ಬರ ಮತ್ತು ಕ್ರಿಮಿನಾಶಕ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ಎಸ್.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details