ಕರ್ನಾಟಕ

karnataka

By

Published : Aug 16, 2022, 2:04 PM IST

ETV Bharat / city

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಹಲ್ಲೆ.. ಭದ್ರಾವತಿಯಲ್ಲಿ ಡಿಚ್ಚಿ ಮುಬಾರಕ್​ನಿಂದ ಯುವಕನ ಮೇಲೆ ಹಲ್ಲೆ

ಶಿವಮೊಗ್ಗ ಜಿಲ್ಲೆಯಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣ ಮಾಸುವ ಮುನ್ನಲೆ ಮತ್ತೊಂದು ಹಲ್ಲೆ ಪ್ರಕರಣ ಬೆಳಕಿಗೆ ಬಂದಿದೆ.

attack on young man in Shivamogga  Dicchi mubarak attack on young man  Shivamogga crime news  144 section in Shivamogga  ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಹಲ್ಲೆ ಪ್ರಕರಣ  ಭದ್ರಾವತಿಯಲ್ಲಿ ಡಿಚ್ಚಿ ಮುಬಾರಕ್​ನಿಂದ ಯುವಕನ ಮೇಲೆ ಹಲ್ಲೆ  ಶಿವಮೊಗ್ಗ ಜಿಲ್ಲೆಯಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣ  ಡಿಚ್ಚಿ ಮುಬಾರಕ್​ನಿಂದ ಹಲ್ಲೆ  ಮದ್ಯ ಮಾರಾಟ ಬಂದ್
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಹಲ್ಲೆ ಪ್ರಕರಣ

ಶಿವಮೊಗ್ಗ: ಭದ್ರಾವತಿಯಲ್ಲಿ ಯುವಕನೊಬ್ಬನ ಮೇಲೆ ಮುಬಾರಕ್ ಅಲಿಯಾಸ್ ಡಿಚ್ಚಿ ಮುಬಾರಕ್​ನಿಂದ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಯುವಕ ಸುನೀಲ್ ಎಂದು ಗುರುತಿಸಲಾಗಿದ್ದು, ಭದ್ರಾವತಿಯ ನೆಹರು ನಗರದ ನಿವಾಸಿಯಾಗಿದ್ದಾನೆ. ಇವರು ಇಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೋಗುವಾಗ ಅದೇ ಬಡಾವಣೆಯ ಡಿಚ್ಚಿ ಮುಬಾರಕ್ ಏಕಾಏಕಿ ಸುನೀಲ್​ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಹಲ್ಲೆ ಪ್ರಕರಣ

ಹಲ್ಲೆಯಿಂದಾಗಿ ಸುನೀಲ್​ನ ಮೂಗಿನ ಮೂಳೆ ಮುರಿತವಾಗಿದೆ. ಗಂಭೀರವಾಗಿ ಗಾಯಗೊಂಡ ಸುನೀಲ್​ನನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಭದ್ರಾವತಿ ಹಳೇ ನಗರ ಪೊಲೀಸ್ ಠಾಣೆಯಲ್ಲಿ 101/2022 ಕಲಂ 341, 323 ರಂತೆ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಹಲ್ಲೆ ಪ್ರಕರಣ

ಮದ್ಯ ಮಾರಾಟ ಬಂದ್: ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣದಲ್ಲಿ ಇಂದು ಮದ್ಯ ಮಾರಾಟ ನಿಷೇಧಿಸಿದೆ. ಬೆಳಗ್ಗೆ 6 ರಿಂದ ರಾತ್ರಿ 12 ರ ತನಕ ಮದ್ಯ ಮಾರಾಟಕ್ಕೆ ಬ್ರೇಕ್​ ಹಾಕಲಾಗಿದೆ. ಈ ಕುರಿತು ಅಬಕಾರಿ ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್​ ಅಂಗಡಿಗಳನ್ನು ಬಂದ್ ಮಾಡಿಸಿ, ಪರಿಶೀಲಿಸಿದ್ದಾರೆ.

ಓದಿ:ಶಿವಮೊಗ್ಗದಲ್ಲಿ ಗುರುವಾರದವರೆಗೆ 144 ಸೆಕ್ಷನ್ ಜಾರಿ.. ಬೈಕ್​ನಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ

ABOUT THE AUTHOR

...view details