ಕರ್ನಾಟಕ

karnataka

ETV Bharat / city

ಶಿವಮೊಗ್ಗದಲ್ಲಿ ಮೊದಲ ದಿನದ ಲಾಕ್​ಡೌನ್ ಯಶಸ್ವಿ: ಸಚಿವ ಕೆ.ಎಸ್​.ಈಶ್ವರಪ್ಪ - ಶಿವಮೊಗ್ಗದಲ್ಲಿ ಮೊದಲ ದಿನದ ಲಾಕ್​ಡೌನ್ ಯಶಸ್ವಿಯಾಗಿದೆ

ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಮನೆಯಲ್ಲಿದ್ದು, ಸಹಕರಿಸಿದ್ದಕ್ಕೆ ಶಿವಮೊಗ್ಗ ಜಿಲ್ಲೆಯ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೀಗೆಯೇ ಮುಂದಿನ ಹದಿನಾಲ್ಕು ದಿನವು ಸಹಕರಿಸಿ ಎಂದು ಸಚಿವ ಕೆ.ಎಸ್​.ಈಶ್ವರಪ್ಪ ಮನವಿ ಮಾಡಿದರು.

Shivamogga
ಸಚಿವ ಕೆ.ಎಸ್​.ಈಶ್ವರಪ್ಪ

By

Published : May 11, 2021, 8:18 AM IST

ಶಿವಮೊಗ್ಗ: ಕೊರೊನಾ ತಡೆಗಟ್ಟಲು ವಿಧಿಸಿರುವ ಲಾಕ್​ಡೌನ್​ಗೆ ಜಿಲ್ಲೆಯಲ್ಲಿ ಮೊದಲ ದಿನ ಉತ್ತಮ ಬೆಂಬಲ ವ್ಯಕ್ತವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ಹೇಳಿದರು.

ಸಚಿವ ಕೆ.ಎಸ್​.ಈಶ್ವರಪ್ಪ

ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಕೋವಿಡ್ ರೋಗಿಗಳ ಕುಟುಂಬಕ್ಕೆ ಕೋವಿಡ್ ಸುರಕ್ಷಾ ಪಡೆ, ಸೇವಾ ಭಾರತಿ, ಗಾಂಧಿ ಬಜಾರ್ ದಿನಸಿ ವರ್ತಕರ ಸಂಘದ ವತಿಯಿಂದ ಹದಿನೈದು ದಿನಗಳ ಕಾಲ ಬೆಳಗ್ಗೆ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿ ಊಟ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಮನೆಯಲ್ಲಿದ್ದು, ಸಹಕರಿಸಿದ್ದಕ್ಕೆ ಜಿಲ್ಲೆಯ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೀಗೆಯೇ ಮುಂದಿನ ಹದಿನಾಲ್ಕು ದಿನವು ಸಹಕರಿಸಿ ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಕೊರೊನಾ ಜಾಸ್ತಿಯಾಗುತ್ತಿರುವ ಸಮಯದಲ್ಲಿ ಜನರು ಮನೆಯಿಂದ ಹೊರಬರದೆ, ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದರು.

ಇದನ್ನೂ ಓದಿ:ಆಸ್ಪತ್ರೆಗೆ ಹೋದವರು ಜೀವಂತವಾಗಿ ಮರಳಿ ಬರುವ ಭರವಸೆ ಹಳ್ಳಿಗರಲ್ಲಿ ಉಳಿದಿಲ್ಲ: ಶಾಸಕಿ ಅಂಜಲಿ ನಿಂಬಾಳ್ಕರ್

For All Latest Updates

TAGGED:

ABOUT THE AUTHOR

...view details