ಶಿವಮೊಗ್ಗ: ನಗರದ ಆಲ್ಕೊಳ ಕೆರೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಆರೋಪಿಗಳನ್ನು ಬಂಧಿಸಿ, ಅವರ ಬಳಿ ಇದ್ದ 1 ಕೆ.ಜಿ 250 ಗ್ರಾಂ ಗಾಂಜಾವನ್ನು ಇಲ್ಲಿನ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧದ ಕಾರ್ಯಾಚರಣೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಅವರನ್ನೊಳಗೊಂಡ ತಂಡವನ್ನು ಎಸ್ಪಿ ಲಕ್ಷ್ಮೀ ಪ್ರಸಾದ್ ರಚಿಸಿದ್ದಾರೆ. ಈ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಗಾಂಜಾ ಮಾರುತ್ತಿದ್ದ ತರಿಕೆರೆಯ ಸದ್ದಾಂ(30), ಶಕೀಲ್(30), ಶಿವಮೊಗ್ಗ ಎಲ್ಬಿಎಸ್ ನಗರದ ಶ್ರೀಕಾಂತ್ ಅಲಿಯಾಸ್ ರೊನಾಲ್ಡೊ(24) ಮತ್ತು ವೆಂಕಟೇಶ ನಗರದ ಸಂತೋಷ್ (26) ರನ್ನು ಬಂಧಿಸಿದ್ದಾರೆ.