ಕರ್ನಾಟಕ

karnataka

ETV Bharat / city

ಶಿವಮೊಗ್ಗದಲ್ಲಿ ಗಾಂಜಾ ಮಾರುತ್ತಿದ್ದ ನಾಲ್ವರು ಖದೀಮರ ಬಂಧನ

ಆಲ್ಕೊಳ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

By

Published : Jan 1, 2022, 3:38 PM IST

four arrested under drugs selling case at shivamogga
ಶಿವಮೊಗ್ಗ ಗಾಂಜಾ ಮಾರಾಟ ಕೇಸ್​

ಶಿವಮೊಗ್ಗ: ನಗರದ ಆಲ್ಕೊಳ ಕೆರೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಆರೋಪಿಗಳನ್ನು ಬಂಧಿಸಿ, ಅವರ ಬಳಿ ಇದ್ದ 1 ಕೆ.ಜಿ 250 ಗ್ರಾಂ ಗಾಂಜಾವನ್ನು ಇಲ್ಲಿನ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾದಕ ವಸ್ತು ಗಾಂಜಾ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧದ ಕಾರ್ಯಾಚರಣೆಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಅವರನ್ನೊಳಗೊಂಡ ತಂಡವನ್ನು ಎಸ್ಪಿ ಲಕ್ಷ್ಮೀ ಪ್ರಸಾದ್ ರಚಿಸಿದ್ದಾರೆ. ಈ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಗಾಂಜಾ ಮಾರುತ್ತಿದ್ದ ತರಿಕೆರೆಯ ಸದ್ದಾಂ(30), ಶಕೀಲ್(30), ಶಿವಮೊಗ್ಗ ಎಲ್​ಬಿಎಸ್ ನಗರದ ಶ್ರೀಕಾಂತ್ ಅಲಿಯಾಸ್ ರೊನಾಲ್ಡೊ(24) ಮತ್ತು ವೆಂಕಟೇಶ ನಗರದ ಸಂತೋಷ್ (26) ರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:ಅತಿ ವೇಗ ತಂದ ಆಪತ್ತು.. ಕಾರು ಪಲ್ಟಿಯಾಗಿ ಯುವಕ ಸಾವು, ನಾಲ್ವರಿಗೆ ಗಾಯ..

ಈ ನಾಲ್ವರು ಬೈಕ್​ನಲ್ಲಿ ಬಂದು ಕೆರೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದರು. ದಾಳಿಯ ವೇಳೆ ಪೊಲೀಸರು 45 ಸಾವಿರ ರೂ. ಮೌಲ್ಯದ 1 ಕೆ.ಜಿ 250 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಾಲ್ವರ ವಿರುದ್ಧ ಕಲಂ 8(c), 20(b) NDPS ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ABOUT THE AUTHOR

...view details