ಕರ್ನಾಟಕ

karnataka

ETV Bharat / city

ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕೆರೆಗೆ ಉರುಳಿದ ಬಸ್ - ಸಾಗರ ಡಿವೈಎಸ್​ಪಿ ವಿನಾಯಕ್

ಸಾಗರದಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದ ಕೆರೆ ಏರಿ ಮೇಲೆ ಏಕಾಏಕಿ ಬೈಕ್​ ಅಡ್ಡಬಂದಿದೆ. ಇದನ್ನು ತಪ್ಪಿಸಲು ಮುಂದಾದಾಗ​ ಚಾಲಕನ ನಿಯಂತ್ರಣ ತಪ್ಪಿ ಬಸ್​ ಕೆರೆಗೆ ಉರುಳಿದೆ.

Shivammoga
ಕೆರೆಗೆ ಉರುಳಿದ ಬಸ್

By

Published : Jul 30, 2021, 12:08 PM IST

ಶಿವಮೊಗ್ಗ: ಎದುರಿಗೆ ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕೆಎಸ್​ಆರ್​ಟಿಸಿ ಬಸ್ಸೊಂದು ಕೆರೆಗೆ ಉರುಳಿರುವ ಘಟನೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದ ಬಳಿ ನಡೆದಿದೆ.

ಕೆರೆಗೆ ಉರುಳಿದ ಬಸ್

ಸಾಗರದಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ಕಾಸ್ಪಾಡಿ ಗ್ರಾಮದ ಕೆರೆ ಏರಿ ಮೇಲೆ ಏಕಾಏಕಿ ಬೈಕ್​ ಅಡ್ಡಬಂದಿದೆ. ಇದನ್ನು ತಪ್ಪಿಸಲು ಮುಂದಾದಾಗ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಈ ವೇಳೆ, ಬಸ್​ನಲ್ಲಿದ್ದ 28 ಪ್ರಯಾಣಿಕರ ಪೈಕಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸಾಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್ ಸವಾರಿಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ.

ಕೆರೆಗೆ ಉರುಳಿದ ಬಸ್

ಅಪಘಾತದಿಂದ ರಸ್ತೆ ಸಂಚಾರ ಬಂದ್ ಆಗಿತ್ತು. ಸ್ಥಳಕ್ಕೆ‌ ಸಾಗರ ಡಿವೈಎಸ್​ಪಿ ವಿನಾಯಕ್ ಭೇಟಿ ನೀಡಿ‌, ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಒಂದೇ ಹೋಟೆಲ್​​​​ನಲ್ಲಿ ಬ್ರೇಕ್ ಫಾಸ್ಟ್ ಮಾಡಿದ ಈಶ್ವರಪ್ಪ- ಹ್ಯಾಟ್ರಿಕ್ ಹೀರೋ!

ABOUT THE AUTHOR

...view details