ಶಿವಮೊಗ್ಗ:ನಗರದಲ್ಲಿ ಮಿತಿ ಮೀರಿದ ಅಕ್ರಮ ಮದ್ಯ ಮಾರಾಟ, ಗಾಂಜಾ ಹಾವಳಿ, ರೌಡಿಸಂನಂಥ ಕಾನೂನುಬಾಹಿರ ಚಟುವಟಿಕೆಗಳನ್ನು ಮಟ್ಟ ಹಾಕಲು ವಿಫಲರಾಗಿದ್ದೀರಾ?ಎಂದುಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ.
ಸಿಗೆಹಟ್ಟಿಯಲ್ಲಿ ರಾತ್ರಿ ದುಷ್ಕರ್ಮಿಗಳ ತಂಡ ಆಟೋ ಹಾಗೂ ಬೈಕ್ಗೆ ಬೆಂಕಿ ಹಚ್ಚಿ ಪರಾರಿಯಾಗಿತ್ತು. ಹಾಗಾಗಿ, ಸ್ಥಳಕ್ಕೆ ಭೇಟಿ ನೀಡಿ ಆಟೋ ಮಾಲೀಕರಿಗೆ ಸಚಿವರು ಆರ್ಥಿಕ ನೆರವು ನೀಡಿದ ಘೋಷಿಸಿದರು.
ಕೆಲಸ ಮಾಡಲು ಇಷ್ಟವಿಲ್ಲದಿದ್ದರೆ ಮನೆಗೆ ಹೋಗಿ, ಬೇರೆಯವರನ್ನು ಕರೆತರುತ್ತೇವೆ. ನಗರದಲ್ಲಿ ರೌಡಿಸಂ, ಗಾಂಜಾ, ಅಕ್ರಮ ಮದ್ಯ ಮಾರಾಟ ಮೀತಿ ಮೀರುತ್ತಿದೆ. ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ಪೊಲೀಸರೆಂದರೆ ಯಾರಿಗೂ ಭಯ ಇಲ್ಲದಂತಾಗಿದೆ. ಇನ್ನು ಮುಂದೆ ಇದನ್ನು ನಾನು ಸಹಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಸಿದರು.
ಆಟೋ ಮಾಲೀಕರ ಮನೆಗೆ ಭೇಟಿ ನೀಡಿದ ನಂತರ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ 24 ಗಂಟೆಯೂ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಯಾಕೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ?. ಜನ ಸತ್ತ ಮೇಲೆ ಹೋಗುತ್ತೀರಾ? ಇದನ್ನು ನೋಡಿದರೆ, ಶಿವಮೊಗ್ಗದಲ್ಲಿ ಪೊಲೀಸ್ ಇಲಾಖೆ ಇದೆಯೇ? ಎನಿಸುತ್ತದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.