ಬೆಂಗಳೂರು/ಶಿವಮೊಗ್ಗ: ನಗರದ ಸದಾಶಿವನಗರಲ್ಲಿರುವ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಬುಧವಾರ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಸಚಿವರೊಂದಿಗೆ ಶಿವಮೊಗ್ಗ ಕ್ಷೇತ್ರದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು.
ರಾಜ್ಯ ಸರ್ಕಾರವು ಕ್ಷೇತ್ರಕ್ಕೆ ನೀಡಬೇಕಾದ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ರಾಘವೇಂದ್ರ ಅವರು ಮನವಿ ಮಾಡಿದರು. ಇದಕ್ಕಾಗಿ ಕೇಂದ್ರ ಸರ್ಕಾರದಿಂದ ಏನಾದರೂ ತೊಡಕುಂಟಾದೆ, ಪರವಾನಗಿಗಳ ಅಗತ್ಯವಿದ್ದರೆ ಮಾತುಕತೆ ನಡೆಸುತ್ತೇನೆ ಎಂದು ಭರವಸೆ ನೀಡಿದರು.