ಕರ್ನಾಟಕ

karnataka

ETV Bharat / city

ರಸಗೊಬ್ಬರಕ್ಕೆ ಹೆಚ್ಚಿನ ದರ ವಿಧಿಸಿದಲ್ಲಿ ದೂರು ನೀಡಲು ಸೂಚನೆ - ಶಿವಮೊಗ್ಗ ಲೇಟೆಸ್ಟ್​ ನ್ಯೂಸ್

ರಸಗೊಬ್ಬರ ಮಾರಾಟಗಾರರು 2021ರ ಏಪ್ರಿಲ್ 1ರಿಂದ ರಸಗೊಬ್ಬರ ಧಾರಣೆ ಏರಿಕೆಯಾಗಿದೆ ಎಂಬ ನೆಪವೊಡ್ಡಿ ಲಭ್ಯವಿರುವ ದಾಸ್ತಾನಿನ ರಸಗೊಬ್ಬರಗಳ ಚೀಲದ ಮೇಲಿನ ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ರೈತರಿಗೆ ಮಾರಾಟ ಮಾಡುವಂತಿಲ್ಲ ಎಂದು ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notice to Complain if Higher Cost of Fertilizer
ರಸಗೊಬ್ಬರಕ್ಕೆ ಹೆಚ್ಚಿನ ದರ ವಿಧಿಸಿದಲ್ಲಿ ದೂರು ನೀಡಲು ಸೂಚನೆ

By

Published : Apr 13, 2021, 3:17 PM IST

ಶಿವಮೊಗ್ಗ: ರಸಗೊಬ್ಬರದ ಚೀಲದ ಮೇಲೆ ಕೃಷಿ ಇಲಾಖೆ ನಮೂದಿಸಿರುವ ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದಲ್ಲಿ ತಪ್ಪದೇ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆ ಕಚೇರಿಗೆ ದೂರು ನೀಡುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಸಗೊಬ್ಬರ ಮಾರಾಟಗಾರರು 2021ರ ಏಪ್ರಿಲ್ 1ರಿಂದ ರಸಗೊಬ್ಬರ ಧಾರಣೆ ಏರಿಕೆಯಾಗಿದೆ ಎಂಬ ನೆಪವೊಡ್ಡಿ ಲಭ್ಯವಿರುವ ದಾಸ್ತಾನಿನ ರಸಗೊಬ್ಬರಗಳ ಚೀಲದ ಮೇಲಿನ ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ರೈತರಿಗೆ ಮಾರಾಟ ಮಾಡುವಂತಿಲ್ಲ.

ಈ ರೀತಿ ಮಾರಾಟ ಮಾಡಿದರೆ ರಸಗೊಬ್ಬರ ನಿಯಂತ್ರಣ ಆದೇಶ 1985ರ ಅನ್ವಯ ಕಾನೂನು ಪ್ರಕಾರ ವಂಚನೆಯ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಅಂತಹ ಮಾರಾಟಗಾರರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಓದಿ:ನೋಡ ನೋಡುತ್ತಲೇ ಸಂಪ್​ಗೆ ಬಿದ್ದ ಮಗು - ವಿಡಿಯೋ ವೈರಲ್​

ABOUT THE AUTHOR

...view details