ಕರ್ನಾಟಕ

karnataka

ETV Bharat / city

ಮೂಲಸೌಕರ್ಯಕ್ಕೆ  ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ - shivmogga Karnataka Dalit Conflict Committee protest

ಮಹಾನಗರ ಪಾಲಿಕೆ ಹಕ್ಕಿಪಿಕ್ಕಿ ಜನಾಂಗದವರು ವಾಸಿಸುತ್ತಿರುವ ಪ್ರದೇಶವನ್ನು ಸ್ಲಂ ಎಂದು ಘೋಷಿಸಿ ಹಕ್ಕುಪತ್ರ ನೀಡಿ ಎಲ್ಲಾ ಮೂಲ ಸವಲತ್ತುಗಳನ್ನು ಒದಗಿಸಬೇಕು..

shivamogga
ಅನಿರ್ದಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆ

By

Published : Oct 20, 2020, 4:36 PM IST

ಶಿವಮೊಗ್ಗ: ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆಯನ್ನು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಲಾಗುತ್ತಿದೆ.

ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.6 ರ ಅಂಬೇಡ್ಕರ್ ನಗರದಲ್ಲಿ ವಾಸಿಸುತ್ತಿರುವ ಹಕ್ಕಿಪಿಕ್ಕಿ ಸಮುದಾಯದ 350 ಕ್ಕೂ ಹೆಚ್ಚು ಕುಟುಂಬಗಳಿಗೆ ಸರಿಯಾದ ಮೂಲಸೌಕರ್ಯಗಳು ಹಾಗೂ ವಿದ್ಯುತ್ ಸಂಪರ್ಕವನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಡಿಎಸ್‌ಎಸ್‌ ವತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆ

ಮಹಾನಗರ ಪಾಲಿಕೆ ಹಕ್ಕಿಪಿಕ್ಕಿ ಜನಾಂಗದವರು ವಾಸಿಸುತ್ತಿರುವ ಪ್ರದೇಶವನ್ನು ಸ್ಲಂ ಎಂದು ಘೋಷಿಸಿ ಹಕ್ಕುಪತ್ರ ನೀಡಿ ಎಲ್ಲಾ ಮೂಲ ಸವಲತ್ತುಗಳನ್ನು ಒದಗಿಸಬೇಕು. ಇಲ್ಲವಾದ್ರೆ ಬೇಡಿಕೆ ಈಡೇರುವವರೆಗೂ ಧರಣಿ ಸತ್ಯಾಗ್ರಹ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

ABOUT THE AUTHOR

...view details