ಶಿವಮೊಗ್ಗ: ಸಾಗರದ ಉಪ ಅರಣ್ಯಾಧಿಕಾರಿಗಳ ಕಚೇರಿ ಆವರಣದ ದಾಸ್ತಾನು ಕೊಠಡಿಯ ಕಾವಲುಗಾರ ನಾಗರಾಜ್ ಎಂಬಾತನನ್ನು ಹತ್ಯೆ ಮಾಡಲಾಗಿದ್ದು, ನಾಗರಾಜ್ ಅವರ ಮೃತದೇಹ ಸಾಗರ ತಾಲೂಕು ಐಗಿನ ಬೈಲ್ನ ನೇದರಹಳ್ಳಿ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ.
ನಾಗರಾಜ್ ಮೃತ ದೇಹವನ್ನು ಶಿವಮೊಗ್ಗಕ್ಕೆ ರವಾನಿಸಲಾಗಿದೆ. ನಾಗರಾಜ್ ಜೊತೆ ಕೆಲಸ ಮಾಡುತ್ತಿದ್ದ ಇನ್ನಿಬ್ಬರು ಸಹ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಹುಡುಕಾಟ ಮುಂದುವರೆದಿದೆ. ಕಚೇರಿಯಲ್ಲಿ ಶ್ರೀಗಂಧ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತಗಳಿದ್ದವು. ಇವುಗಳನ್ನು ಕಳ್ಳತನ ಮಾಡಲು ಬಂದವರು ನಾಗರಾಜ್ನನ್ನು ಕೊಲೆ ಮಾಡಿ ಮೃತದೇಹವನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ.