ಕರ್ನಾಟಕ

karnataka

By

Published : Mar 19, 2022, 6:45 AM IST

ETV Bharat / city

ತುಮಕೂರು: ಕುಡಿದ ಅಮಲಿನಲ್ಲಿ ತೂರಾಡುತ್ತಲೇ ಶಾಲೆಗೆ ಬಂದ ಶಿಕ್ಷಕ ಅಮಾನತು

ಕುಡಿದ ಅಮಲಿನಲ್ಲೇ ಮಕ್ಕಳಿಗೆ ಪಾಠ ಮಾಡಲು ಬಂದಿದ್ದ ತುಮಕೂರು ಜಿಲ್ಲೆಯ ಕುಣಿಗಲ್​ ತಾಲೂಕಿನ ಹೊಸಕೆರೆ ಗ್ರಾಮದ ಸರ್ಕಾರಿ ಶಾಲೆಯ ಸಹ ಶಿಕ್ಷಕ ಕಾಂತರಾಜ್ ಅವರನ್ನ ಅಮಾನತು ಮಾಡಲಾಗಿದೆ.

ಕಾಂತರಾಜ್
ಕಾಂತರಾಜ್

ತುಮಕೂರು: ಮಕ್ಕಳಿಗೆ ಪಾಠ ಹೇಳಿಕೊಡಬೇಕಾದ ಸರ್ಕಾರಿ ಶಾಲೆ ಶಿಕ್ಷಕನೊಬ್ಬ ಮದ್ಯ ಸೇವಿಸಿ ತೂರಾಡುತ್ತಲೇ ಶಾಲೆಗೆ ಬಂದ ಹಿನ್ನೆಲೆಯಲ್ಲಿ ಅಮಾನತ್ತುಗೊಂಡಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.

ಕಾಂತರಾಜ್ ಅಮಾನತುಗೊಂಡಿರುವ ಶಿಕ್ಷಕ. ಈತ ಜಿಲ್ಲೆಯ ಕುಣಿಗಲ್ ತಾಲೂಕಿನ ಹೊಸಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಹ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದಾನೆ. ಮದ್ಯಸೇವಿಸಿ ಶಾಲೆಗೆ ಬಂದಿರುವ ವಿಚಾರ ಗ್ರಾಮಸ್ಥರ ಗಮನಕ್ಕೆ ಬರುತ್ತಿದ್ದಂತೆ ಶಾಲೆಯ ಬಳಿ ಜಮಾಯಿಸಿದ ಪೋಷಕರು, ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡರು. ಬಳಿಕ ಕುಣಿಗಲ್ ಬಿಇಒ ತಿಮ್ಮರಾಜು ಅವರ ಗಮನಕ್ಕೆ ತಂದಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಬಿಇಒ, ಶಿಕ್ಷಕ ಕಾಂತರಾಜು ಅವರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮದ್ಯ ಸೇವಿಸಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ. ಈ ಸಂಬಂಧ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ವರ್ಲ್ಡ್​ ಹ್ಯಾಪಿನೆಸ್​ ಪಟ್ಟಿ: ಫಿನ್​ಲ್ಯಾಂಡ್​ ಅತ್ಯಂತ 'ಸುಖಿ ದೇಶ', ಅಫ್ಘಾನಿಸ್ತಾನ 'ಅತೃಪ್ತಿಕರ' ದೇಶ

ABOUT THE AUTHOR

...view details