ಕರ್ನಾಟಕ

karnataka

ETV Bharat / city

ತುಮಕೂರಿನಲ್ಲಿ ಭೀಕರ ಅಪಘಾತ: ನಾಲ್ವರು ರೈತರ ಸಾವು

ತುಮಕೂರು-ಶಿವಮೊಗ್ಗ ಹೆದ್ದಾರಿಯಲ್ಲಿ ಭೀಕರ ಅಪಘಾತ ನಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ರೈತರು ಸಾವನ್ನಪ್ಪಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

By

Published : Oct 17, 2021, 8:45 AM IST

Updated : Oct 17, 2021, 9:56 AM IST

Accident in Tumkur,  four died
ತುಮಕೂರಿನಲ್ಲಿ ಭೀಕರ ಅಪಘಾತ: ನಾಲ್ವರು ರೈತರ ಸಾವು

ತುಮಕೂರು:ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನದ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ತುಮಕೂರು-ಶಿವಮೊಗ್ಗ ಹೆದ್ದಾರಿಯಲ್ಲಿರುವ ಗೊಲ್ಲಹಳ್ಳಿ ಸಮೀಪ ಸಂಭವಿಸಿದೆ.

ಹಾಸನದಿಂದ ಅರಸೀಕೆರೆ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ತುಮಕೂರಿನಿಂದ ಹೂ ಕೊಂಡೊಯ್ಯುತ್ತಿದ್ದ ರೈತರಿದ್ದ ಗೂಡ್ಸ್ ವಾಹನದ ನಡುವೆ ಮುಂಜಾನೆ 5.30ರ ವೇಳೆಗೆ ಅಪಘಾತ ಜರುಗಿದೆ. ಓರ್ವ ವ್ಯಕ್ತಿಗೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದ ದೃಶ್ಯ

ಪೊಲೀಸರು ಮತ್ತು ಸ್ಥಳೀಯರು ಗೂಡ್ಸ್ ವಾಹನದಲ್ಲಿ ಸಿಲುಕಿದ್ದ ರೈತರ ಶವಗಳನ್ನು ಹೊರ ತೆಗೆದಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದ ದೃಶ್ಯ

ಇದನ್ನೂ ಓದಿ:ಬೆಂಗಳೂರಿನ ಪೊಲೀಸ್‌ ವಸತಿ ಸಮುಚ್ಚಯದಲ್ಲಿ ಬಿರುಕು, ವಾಲಿದ ಕಟ್ಟಡ: 32 ಕುಟುಂಬಗಳ ಸ್ಥಳಾಂತರ

Last Updated : Oct 17, 2021, 9:56 AM IST

ABOUT THE AUTHOR

...view details