ತುಮಕೂರು: ಜಿಲ್ಲೆಯ ಗುಬ್ಬಿ ತಾಲೂಕಿನ ಅಣ್ಣಪ್ಪನಹಳ್ಳಿ ಗ್ರಾಮದ ಬಳಿ ನಿನ್ನೆ ರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರುಗಳಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿವೆ.
ಕಾರುಗಳ ಮುಖಾಮುಖಿ ಡಿಕ್ಕಿ.. ನೋಡ ನೋಡುತ್ತಲೇ ಸುಟ್ಟು ಕರಕಲು!
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಗುಬ್ಬಿ ತಾಲೂಕಿನ ಅಣ್ಣಪ್ಪನಹಳ್ಳಿ ಬಳಿ ನಡೆದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕಾರುಗಳ ಮುಖಾಮುಖಿ ಡಿಕ್ಕಿ
ಡೀಗನಹಳ್ಳಿಯ ಹೇಮಂತ್ ಮತ್ತು ದೊಡ್ಡ ಕುನಾಲ್ ಗ್ರಾಮದ ರಾಕೇಶ್ ಎಂಬುವರಿಗೆ ಸೇರಿದ ಕಾರುಗಳು ಸುಟ್ಟು ಭಸ್ಮವಾಗಿವೆ. ಈ ಘಟನೆ ಚೇಳೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇವೆರಡೂ ಪ್ರವಾಸಿ ನೋಂದಣಿ ಕಾರುಗಳಾಗಿವೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತನಿಖೆ ನಂತರ ತಿಳಿಯಲಿದೆ.
Last Updated : Aug 27, 2020, 8:03 PM IST