ಕರ್ನಾಟಕ

karnataka

By

Published : May 1, 2021, 5:20 PM IST

Updated : May 1, 2021, 6:56 PM IST

ETV Bharat / city

ತುಮಕೂರಿನಲ್ಲಿ ಪಿಪಿಇ ಕಿಟ್ ಧರಿಸಿ ಸೋಂಕಿತರನ್ನು ಭೇಟಿಯಾದ ಸಿ.ಟಿ ರವಿ

ಕೊರೊನಾ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಅವರೊಂದಿಗೆ ಸಭೆ ನಡೆಸಿ ಸಿ ಟಿ ರವಿ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು..

C T Ravi
C T Ravi

ತುಮಕೂರು : ಜಿಲ್ಲಾಸ್ಪತ್ರೆಯಲ್ಲಿ ತೆರೆಯಲಾಗಿರುವ ಕೋವಿಡ್ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರನ್ನು ಭೇಟಿಯಾದ ಮಾಜಿ ಸಚಿವ ಸಿ ಟಿ ರವಿ, ಅವರಿಗೆ ಆತ್ಮಸ್ಥೈರ್ಯ ತುಂಬಿದರು.

ತುಮಕೂರಿನಲ್ಲಿ ಪಿಪಿಇ ಕಿಟ್ ಧರಿಸಿ ಸೋಂಕಿತರನ್ನು ಭೇಟಿಯಾದ ಸಿ.ಟಿ ರವಿ

ಪಿಪಿಇ ಕಿಟ್ ಧರಿಸಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವ ಘಟಕಕ್ಕೆ ತೆರಳಿದ ಸಿ ಟಿ ರವಿ, ಸೋಂಕಿತರು ಪಡೆಯುತ್ತಿರುವ ಚಿಕಿತ್ಸೆಯ ಕುರಿತಂತೆ ಚರ್ಚೆ ನಡೆಸಿದರು. ಅಲ್ಲದೆ ಶೀಘ್ರ ಗುಣಮುಖರಾಗುವಂತೆ ವಾತಾವರಣವನ್ನು ಸರ್ಕಾರ ನಿರ್ಮಿಸಿದೆ. ಪೂರಕವಾದ ಚಿಕಿತ್ಸಾ ಸೌಲಭ್ಯವನ್ನು ನೀಡಲಿದೆ ಎಂದು ಸೋಂಕಿತರಿಗೆ ಧೈರ್ಯ ತುಂಬಿದರು.

ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಅವರೊಂದಿಗೆ ಸಭೆ ನಡೆಸಿ ಸಿ ಟಿ ರವಿ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.

Last Updated : May 1, 2021, 6:56 PM IST

ABOUT THE AUTHOR

...view details