ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಮತ್ತು ಅವರ ಪುತ್ರಿಗೆ ಕೊರೊನಾ ತಗುಲಿದ್ದು, ಹೋಮ್ ಐಸೊಲೇಶನ್ನಲ್ಲಿ ಇದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ನಾಗೇಂದ್ರಪ್ಪ ಸ್ಪಷ್ಟಪಡಿಸಿದ್ದಾರೆ.
ಸಚಿವರಿಗೆ ನಿನ್ನೆ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ನಿನ್ನೆ ಚಿಕ್ಕನಾಯಹಳ್ಳಿಯಲ್ಲಿ ಸ್ವಾಬ್ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಬೆಳಗ್ಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.