ಕರ್ನಾಟಕ

karnataka

ತುಮಕೂರು ಲೇಖಕಿಯರ ಸಂಘದ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಕಾರ್ಯಕ್ರಮ

By

Published : Jun 23, 2019, 5:21 PM IST

ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಜಿಲ್ಲಾ ಶಾಲೆಗೆ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಕಾರ್ಯಕ್ರಮ ಇಂದು ನಡೆಯಿತು. ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು.

ಪದವಿ ಸ್ವೀಕಾರ ಕಾರ್ಯಕ್ರಮ

ತುಮಕೂರು:ಕರ್ನಾಟಕ ಲೇಖಕಿಯರ ಸಂಘದ ತುಮಕೂರು ಜಿಲ್ಲಾ ಶಾಖೆಗೆ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಕಾರ್ಯಕ್ರಮ ಇಂದು ನಡೆಯಿತು. ತುಮಕೂರಿನ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಜಿಲ್ಲಾಧ್ಯಕ್ಷ ಮಲ್ಲಿಕಾ ಬಸವರಾಜು ಹಾಗೂ ಪದಾಧಿಕಾರಿಗಳು ಪದವಿ ಸ್ವೀಕರಿಸಿದರು.

ತುಮಕೂರು ಲೇಖಕಿಯರ ಸಂಘದ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಕಾರ್ಯಕ್ರಮ

ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನ ಕುಮಾರ್ ಮಾತನಾಡಿ, ಲೇಖಕಿಯರ ಸಂಘ ಉತ್ತಮ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ. ಮಹಿಳೆಯರು ತಮ್ಮಲ್ಲಿನ ಪ್ರತಿಭೆಯನ್ನು ಅನಾವರಣಗೊಳಿಸಲು ಸಂಘ ಸಾಕಷ್ಟು ನೆರವಾಗಿದೆ. ಮುಂದೆಯೂ ಉತ್ತಮ ಲೇಖಕಿಯರನ್ನು ಬೆಳಕಿಗೆ ತರುವ ಮತ್ತು ಅವರ ಪ್ರತಿಭೆಯನ್ನು ಗುರುತಿಸುವ ಕಾರ್ಯ ಮಾಡಲಾಗುತ್ತೆ ಎಂದರು.

ಲೇಖಕಿಯರ ಸಂಘದ ತುಮಕೂರು ಜಿಲ್ಲಾ ಘಟಕ ಉತ್ತಮವಾಗಿ ಕೆಲಸ ಮಾಡುತ್ತಾ ಬಂದಿದೆ. ಹಿಂದಿನ ಅಧ್ಯಕ್ಷರು ಹಲವು ಕಾರ್ಯಕ್ರಮ ನಡೆಸಿ, ಸಂಘದ ಬೆಳವಣಿಗೆಗೆ ಕಾರಣರಾಗಿದ್ದಾರೆ. ನೂತನ ಅಧ್ಯಕ್ಷರು ಸಹ ಉತ್ತಮ ಆಲೋಚನೆಯೊಂದಿಗೆ ಸಂಘಕ್ಕೆ ಹೊಸ ರೂಪುರೇಷೆ ನೀಡಲಿ ಎಂದು ಆಶಿಸಿದರು.

ABOUT THE AUTHOR

...view details