ಕರ್ನಾಟಕ

karnataka

By

Published : May 6, 2022, 10:43 PM IST

ETV Bharat / city

ತುಮಕೂರು: ಶಸ್ತ್ರಚಿಕಿತ್ಸೆ ನಂತರ ಮಹಿಳೆಯರನ್ನು ನೆಲದ ಮೇಲೆ ಮಲಗಿಸಿದ ಆಸ್ಪತ್ರೆ ಸಿಬ್ಬಂದಿ

ಸುಮಾರು 20ಕ್ಕೂ ಹೆಚ್ಚು ಜನ ಮಹಿಳೆಯರಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಿದ ಬಳಿಕ ಪಾವಗಡ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ನೆಲದ ಮೇಲೆ ಮಲಗಿಸಿರುವ ಘಟನೆ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

tumkur-govenrment-hospital-irresponsibility
ಶಸ್ತ್ರ ಚಿಕಿತ್ಸೆ ನಂತರ ನೆಲದ ಮೇಲೆ ಮಲಗಿಸಿದ ಆಸ್ಪತ್ರೆ ಸಿಬ್ಬಂದಿ

ತುಮಕೂರು:ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಿದ ಬಳಿಕ ಮಹಿಳೆಯರನ್ನು ನೆಲದಲ್ಲಿ ಮಲಗಿಸಿದ ಘಟನೆ ತುಮಕೂರು ಜಿಲ್ಲೆ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಸುಮಾರು 20ಕ್ಕೂ ಹೆಚ್ಚು ಜನ ಮಹಿಳೆಯರಿಗೆ ನೆಲದ ಮೇಲೆ ಮಲಗಿಸಿದ ಆಸ್ಪತ್ರೆ ಸಿಬ್ಬಂದಿಯ ಕ್ರಮದಿಂದ ಶಸ್ತ್ರ ಚಿಕಿತ್ಸೆಯ ಬಳಿಕ ಆಸ್ಪತ್ರೆಯಲ್ಲಿ ರೋಗಿಗಳ ಸಂಬಂಧಿಕರು ಬೆಡ್‌ಗಾಗಿ ಪರದಾಡಿದ್ದಾರೆ.

ಗ್ರಾಮೀಣ ಭಾಗದ ಮಹಿಳೆಯರು ಸೇರಿದಂತೆ ಹಲವರು ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರ ಚಿಕಿತ್ಸೆಯ ಬಳಿಕ ಬೆಡ್ ಮೇಲೆ ಮಲಗಿಸದೇ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ. ಆಸ್ಪತ್ರೆಯ ಆಡಳಿತ ಮಂಡಳಿಯ ವಿರುದ್ದ ರೋಗಿಗಳ ಸಂಬಂಧಿಕರು ಹಿಡಿಶಾಪ ಹಾಕಿದ್ದಾರೆ.

ಮಹಿಳೆಯರನ್ನು ನೆಲದ ಮೇಲೆ ಮಲಗಿಸಿರುವ ಆಸ್ಪತ್ರೆ ಸಿಬ್ಬಂದಿ

ಇದನ್ನೂ ಓದಿ:ಮೈಸೂರಿನಲ್ಲಿ ಸ್ಕೂಟರ್​ಗಳ ನಡುವೆ ಅಪಘಾತ.. ಖಾಸಗಿ ಕಂಪನಿ ಆರ್ಕಿಟೆಕ್ಟ್​​ ಸಾವು

For All Latest Updates

ABOUT THE AUTHOR

...view details