ಕರ್ನಾಟಕ

karnataka

By

Published : Jan 28, 2021, 11:39 AM IST

ETV Bharat / crime

ಕಂಟೇನರ್‌ಗೆ ಕಾರು ಡಿಕ್ಕಿ: ನಾಲ್ವರ ದುರ್ಮರಣ

ಅತಿವೇಗದಲ್ಲಿ ಹಿಂದಿನಿಂದ ಬಂದ ಟವೆರಾ ಕಾರು ಕಂಟೇನರ್‌ಗೆ ಡಿಕ್ಕಿ ಹೊಡೆದಿದ್ದು, ನಾಲ್ವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

Madhya Pradesh Accident
ಕಂಟೇನರ್‌ಗೆ ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ

ರಾಜ್‌ಗಢ (ಮಧ್ಯಪ್ರದೇಶ):ಕಂಟೇನರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರಾಜ್‌ಗಢದಲ್ಲಿ ನಡೆದಿದೆ.

ಕಂಟೇನರ್‌ಗೆ ಕಾರು ಡಿಕ್ಕಿಯಾಗಿ ನಾಲ್ವರ ದುರ್ಮರಣ

ಮಹಾರಾಷ್ಟ್ರ ನಾಸಿಕ್‌ಗೆ ಹೋಗುತ್ತಿದ್ದ ಟವೆರಾ ಕಾರು ರಾಷ್ಟ್ರೀಯ ಹೆದ್ದಾರಿ - 3ರಲ್ಲಿ ಅತಿವೇಗದಲ್ಲಿ ಬಂದು ಹಿಂದಿನಿಂದ ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಸಾರಂಗ್‌ಪುರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ:ಬಸ್​-ಟ್ರಕ್​ ಮಧ್ಯೆ ಮುಖಾಮುಖಿ ಡಿಕ್ಕಿ.. 50ಕ್ಕೂ ಹೆಚ್ಚು ಪ್ರಯಾಣಿಕರು ಸುಟ್ಟು ಭಸ್ಮ!

ಸ್ಥಳಕ್ಕೆ ಬಂದ ಸಾರಂಗ್‌ಪುರ ಪೊಲೀಸರು ವಾಹನಗಳ ತೆರವುಗೊಳಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details