ಬೆಂಗಳೂರು: ಲಂಚ ಪಡೆದ ಆರೋಪಡಿ ಮಡಿವಾಳ ಠಾಣೆ ಇನ್ಸ್ಪೆಕ್ಟರ್ ಸುನೀಲ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ.
ವರದಕ್ಷಿಣೆ ಕಿರುಕುಳ ಸಂಬಂಧ ಆರೋಪಿ ಅಜಯ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಪ್ರಕರಣದಲ್ಲಿ ಕೋರ್ಟ್ಗೆ ಹಾಜರಾಗದ ಅಜಯ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮುಂಬೈಯಿಂದ ಆರೋಪಿ ಅಜಯ್ನನ್ನು ವಾರೆಂಟ್ ಮೇಲೆ ಕರೆತಂದಿದ್ದ ಪೊಲೀಸರು ಹಣ ಪಡೆದು ಬಿಟ್ಟು ಕಳಿಸಿದ್ದರು.